ಪ್ರಜ್ವಲ್ ರೇವಣ್ಣ ಕೇಸ್: ದುಶ್ಯಾಸನ ಹಾಗೆ ಮಾಡಿದ್ರೆ ಮಾತೆಯರ ಮಾನ ಹರಾಜಾಗುತ್ತಾ ಎಂದ ಈಶ್ವರಪ್ಪ
ಉಡುಪಿ, ಮೇ 01: ರಾಜ್ಯಾದಂತ್ಯ ಸಂಚಲನ ಮೂಡಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಪ್ರಕರಣದ ಬಗ್ಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿದ್ದು, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದೊಂದು ದರಿದ್ರ ವಿಷಯ. ಇದರ ಬಗ್ಗೆ ನಾವ್ಯಾಕೆ ಮಾತನಾಡೋಣ. ಆ ಬಗ್ಗೆ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದುಶ್ಯಾಸನ ಹಾಗೆ ಮಾಡಿದ ಎಂದು ಮಾತೆಯರ ಮಾನ ಹರಾಜು ಆಗುತ್ತಾ. ಆ ಪ್ರಕರಣದಲ್ಲಿ ದುಶ್ಯಾಶನನೇ ಹಾಳಾದ ಮಹಿಳೆಯರೆಂದರೆ ಸೀತೆ, ಸಾವಿತ್ರಿ ದ್ರೌಪತಿ ಎಂದು ಪೂಜೆ ಮಾಡುತ್ತೇವೆ. ಯಾರು ಮಾನ ಹರಾಜು ಹಾಕಲು ಯತ್ನಿಸಿದರೋ ಅಂತವರ ಮಾನ ಹರಾಜಾಗಿದೆ. ಅಂತವರ ವಿರುದ್ಧ ರಾಜ್ಯ ,ದೇಶಾದ್ಯಂತ ಛೀ..ಥೂ ಎನ್ನುತ್ತಿದ್ದಾರೆ ಎಂದು ಕಿಡಿಕಾರಿದರು.
ಮಾತೆಯರ ಮಾನ ಹರಾಜಾಗಿಲ್ಲ. ಈ ದೇಶ ಸ್ತ್ರೀಯರಿಗೆ ಗೌರವ ಕೊಡುವ ದೇಶ, ಪೂಜೆ ಮಾಡುವ ದೇಶ ದುರುಪಯೋಗ ಮಾಡಿಕೊಂಡವರು ಏನು ಅನುಭವಿಸಬೇಕೋ ಅದನ್ನು ಅನುಭವಿಸುತ್ತಾರೆ ಎಂದು ಹೇಳಿದರು.
ತಮ್ಮ ಪುತ್ರ ಕಾಂತೇಶ್ ತಡೆಯಾಜ್ಞೆ ತಂದ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹೇಗಾದರೂ ಮಾಡಿ ನಮ್ಮನ್ನು ಹಿಂದೆ ಸರಿಸಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಇದು ಕುತಂತ್ರ ರಾಜಕಾರಣ. ಇದಕ್ಕೆ ಹೇಗೆ ಉತ್ತರ ಕೊಡಬೇಕು ಅದಕ್ಕೆ ನಾವು ಸಿದ್ಧರಾಗಿದ್ದೇವೆ. ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ. ಅದು ಬಿಟ್ಟು ಬೇರೆ ಏನೂ ಇಲ್ಲ ಎಂದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications