ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಮಳೆ: ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್‌ 04: ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆಯಿದ್ದು, ಸಂಜೆಯಾಗುತ್ತಿದ್ದಂತೆ ಭಾರೀ ಗಾಳಿಮಳೆ ಶುರುವಾಗಿದೆ. ಗಾಳಿ ಸಹಿತ ಮಳೆ ಬೀಳುತ್ತಿರುವುದರಿಂದ ನಗರ ಭಾಗದ ವಾಹನ ಸವಾರರು, ಪಾದಚಾರಿಗಳು ಓಡಾಡಲು ಪರದಾಡಿದರು. ಮಳೆ ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ, ನದಿ ಪಾತ್ರದ ಜನ ಎಚ್ಚರಿಕೆಯಲ್ಲಿರುವಂತೆ ಸಂದೇಶ ರವಾನಿಸಲಾಗಿದೆ.

Recommended Video

DK Shivakumar : ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ | Oneindia Kannada

ಇದೇ ವೇಳೆ ಇತಿಹಾಸ ಪ್ರಸಿದ್ಧ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ನುಗ್ಗಿದೆ. ಕುಬ್ಜಾ ನದಿಯಿಂದ ಆವೃತ್ತವಾಗಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗೆಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ ನಂಬಿಕೆ ಇದೆ. ಈ ರೀತಿ ಪ್ರವಾಹದ ನೀರು ಉಕ್ಕಿ ಗರ್ಭಗುಡಿಗೆ ಪ್ರವೇಶ ಮಾಡಿದಾಗ ದೇವರಿಗೆ ವಿಶೇಷ ಮಂಗಳಾರತಿ ನಡೆಯುತ್ತದೆ.

Udupi Kamalashile Durgaparameshwari Temple Submerged By Rain Water

 ಬಳ್ಳಾರಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆ; ನಾಶವಾದ ಬೆಳೆಗಳು ಬಳ್ಳಾರಿಯಲ್ಲಿ ಎರಡು ದಿನಗಳಿಂದ ಭಾರೀ ಮಳೆ; ನಾಶವಾದ ಬೆಳೆಗಳು

ಪ್ರತಿವರ್ಷ ಈ ರೀತಿ ನದಿಯ ನೀರು ಗರ್ಭಗುಡಿ ಪ್ರವೇಶ ಮಾಡಿದ ಸಮಯದಲ್ಲಿ ಊರಿನ ಭಕ್ತಾದಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ಭೀತಿ ಇರುವ ಕಾರಣ ದೇವಾಲಯದ ಆಸುಪಾಸಿನ ಒಂದಷ್ಟು ಕುಟುಂಬಗಳು ಮಾತ್ರ ಈ ವಿಶೇಷ ಸಂದರ್ಭದಲ್ಲಿ ದೇವರ ದರ್ಶನ ಗೈದರು.

English summary
Heavy rain reported all over udupi district today. Kamalashile Durgaparameshwari temple submerged by kubja river water
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X