ಉಡುಪಿಯಲ್ಲಿ ಕನಕನ ಗುಡಿಗೆ ಕಾಲ ಸನ್ನಿಹಿತ; ಕನಕ ಭಕ್ತರಲ್ಲಿ ಪುಳಕ
ಉಡುಪಿ, ನವೆಂಬರ್ 15: ಕನಕ ಜಯಂತಿಯಾದ ಇಂದು ಬೆಂಗಳೂರಿನಿಂದ ಕನಕ ಸದ್ಭಾವನಾ ಯಾತ್ರೆಯು ಉಡುಪಿ ತಲುಪಿದ್ದು, ಅಪಾರ ಸಂಖ್ಯೆಯ ಕನಕ ಭಕ್ತರು ಪಾಲ್ಗೊಂಡಿದ್ದರು.
ಉಡುಪಿ ಶ್ರೀಕೃಷ್ಣಮಠದಲ್ಲಿ ಕನಕದಾಸರಿಗೆ ಗೌರವವಿಲ್ಲ, ಭಕ್ತ ಕನಕನಿಗೆ ಸರಿಯಾದ ಪೂಜೆ ಸಲ್ಲುತ್ತಿಲ್ಲ ಎಂಬೆಲ್ಲಾ ಆರೋಪಗಳ ಪಟ್ಟಿಯೇ ಇತ್ತು. ಈ ವಿಚಾರದಲ್ಲಿ ಬಹಳ ಗೊಂದಲಗಳು, ಆರೋಪ ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಈ ಮಧ್ಯೆ ಬೆಂಗಳೂರಿನ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಇಂದು ಉಡುಪಿಗೆ ತಲುಪಿತು. ವರ್ಷಂಪ್ರತಿಯಂತೆ ಈ ಸಲವೂ ಕನಕ ಭಕ್ತರು ಸದ್ಭಾವನಾ ಜ್ಯೋತಿ ರಥಯಾತ್ರೆ ಮೂಲಕ ಕೃಷ್ಣಮಠದ ಕನಕ ಗೋಪುರಕ್ಕೆ ಬಂದು ಪೂಜೆ ಸಲ್ಲಿಸಿದರು. ಪರ್ಯಾಯ ಪಲಿಮಾರು ಶ್ರೀಗಳು ಕನಕದಾಸರ ಮೂರ್ತಿಗೆ ಪೂಜೆ ನೆರವೇರಿಸಿದರು.

ರಥಬೀದಿಯಲ್ಲಿ ಕನಕದಾಸರಿಗೊಂದು ದೇವಸ್ಥಾನ ನಿರ್ಮಾಣ ಮಾಡಬೇಕು ಎಂಬುದು ಬಹಳ ಹಿಂದಿನ ಬೇಡಿಕೆ. ಇದೀಗ ಮಠದ ಪಾರ್ಶ್ವದಲ್ಲಿರುವ ಕನಕ ಮಂಟಪದಲ್ಲಿ ಬೃಹತ್ ಕನಕ ಮೂರ್ತಿ ಸ್ಥಾಪನೆಗೆ ಕಾಲ ಸನ್ನಿಹಿತವಾಗಿದೆ. ಈ ಸಂಬಂಧ ಸಕಲ ಸಿದ್ಧತೆಗಳೂ ನಡೆದಿವೆ. ಜನವರಿ ನಂತರ ಈ ಕನಸು ನೆರವೇರಲಿದ್ದು ಕನಕ ಭಕ್ತರು ಪುಳಕಗೊಂಡಿದ್ದಾರೆ.
ಈಗಿರುವ ಕನಕನ ಪುತ್ಥಳಿಯಿರುವ ಸ್ಥಳದಲ್ಲೇ ಹೊಸ ಗುಡಿ ಮತ್ತು ಮೂರ್ತಿ ತಲೆಯೆತ್ತಲಿದೆ. ತಮಿಳು ನಾಡಿನ ಶಿಲ್ಪಿಗಳು ಕೆತ್ತನಾ ಕಾರ್ಯ ಶುರು ಮಾಡಿದ್ದಾರೆ. ಮುಂದಿನ ಕನಕ ಜಯಂತಿ ವೇಳೆಗೆ ಈ ದೇಗುಲ ನಿರ್ಮಾಣವಾಗಿ ಪೂಜೆ ಆರಂಭವಾಗಲಿರುವುದಾಗಿ ತಿಳಿದುಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications