ಕಾಪು: ಸೊರಕೆ ವಿರುದ್ಧ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿ ಯಾರು?
ಉಡುಪಿ, ಜನವರಿ 22: ಉಡುಪಿಯಲ್ಲಿ ಪರ್ಯಾಯ ಮಹೋತ್ಸವದ ಸಂಭ್ರಮಕ್ಕೆ ತೆರೆಬಿದ್ದಿದೆ. ಇನ್ನೇನಿದ್ದರೂ ಕೃಷ್ಣ ನಾಡಲ್ಲಿ ಮುಂಬರುವ ವಿಧಾನ ಸಭಾ ಚುನಾವಣೆಯದ್ದೇ ಲೆಕ್ಕಾಚಾರ.
ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕಾಪು ಕೂಡಾ ಒಂದು. ಕಡಲ ತಡಿಯಲ್ಲಿ ಸುಂದರ ದೀಪ ಸ್ತಂಭ ಹೊಂದಿರುವ ಕ್ಷೇತ್ರ ಕಾಪು; ಹಿಂದಿನಿಂದಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಪೈಪೋಟಿಯ ಕ್ಷೇತ್ರವಿದು.
ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಲಾಲಾಜಿ ಮೆಂಡನ್ ಕೇವಲ 2 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಕ್ಷೇತ್ರದಲ್ಲಿ ಆರಿಸಿ ಬಂದ ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ ನಗರಾಬಿವೃದ್ಧಿ ಸಚಿವರೂ ಆಗಿದ್ದರು. ಬಳಿಕ ತಮ್ಮ ಸಚಿವ ಸ್ಥಾನವನ್ನು ಅವರು ಕಳೆದುಕೊಳ್ಳಬೇಕಾಯಿತು.

ಇಲ್ಲಿ ಕಾಂಗ್ರೆಸ್ ನಿಂದ ಈ ಬಾರಿ ಮತ್ತೆ ಸೊರಕೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದರೆ ಬಿಜೆಪಿಯಿಂದ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಾಕಿ ಉಳಿದಿದೆ.
ಜಾತಿವಾರು ಲೆಕ್ಕಾಚಾರ ನೋಡಿದರೆ ಬಿಲ್ಲವ, ಬಂಟರು ಇಲ್ಲಿ ಸಮಬಲದಲ್ಲಿದ್ದಾರೆ. ಮೊಗವೀರರು ನಂತರ ಸ್ಥಾನದಲ್ಲಿದ್ದರೆ. ಈ ಮೂವರ ಮತಗಳೇ ಇಲ್ಲಿ ನಿರ್ಣಾಯಕವಾಗಿದೆ. ಇನ್ನು ಅಲ್ಪಸಂಖ್ಯಾತರು ಜಿಲ್ಲೆಯಲ್ಲೇ ಅತೀ ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರ ಕಾಪು ಆಗಿದ್ದು ಅವರ ಮತಗಳೂ ಫಲಿತಾಂಶದ ಮೇಲೆ ಪರಿಣಾಮ ಬೀರಲಿವೆ.
ಬಿಜೆಪಿ ಪಕ್ಷದಲ್ಲಿ ಈ ಬಾರಿ ಶ್ರೀ ರಾಮುಲು ಪರಮಾಪ್ತ ಸುರೇಶ್ ಶೆಟ್ಟಿ ಗುರ್ಮೆ ಮತ್ತು ಮೀನುಗಾರ ಮುಖಂಡ ಯಶ್ ಪಾಲ್ ಸುವರ್ಣ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಆದರೆ ಬಿಜೆಪಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತವರನ್ನು ಪರಿಗಣಿಸುವ ತಂತ್ರಕ್ಕೆ ಮೊರೆ ಹೋಗಿರುವುದರಿಂದ ಮತ್ತೆ ಲಾಲಾಜಿ ಮೆಂಡನ್ ಟಿಕೆಟ್ ಗಿಟ್ಟಿಸುವ ಸಾಧ್ಯತೆ ಇದೆ. ಈ ನಡುವೆ ಜಯಪ್ರಕಾಶ ಹೆಗ್ಡೆ ಅವರ ಹೆಸರು ಅಕಾಂಕ್ಷಿಗಳ ಪಟ್ಟಿಯಲ್ಲಿ ಹೊಸದಾಗಿ ಸ್ಥಾನ ಪಡೆದುಕೊಂಡಿದೆ.
ಈ ಬಾರಿ ಮತ್ತೆ ವಿನಯ್ ಕುಮಾರ್ ಸೊರಕೆ ಗೆಲುವಿನ ನಗೆ ಬೀರ್ತಾರಾ ಅಥವಾ ಕ್ಷೇತ್ರ ಬಿಜೆಪಿ ಪಾಲಾಗುತ್ತಾ ಅನ್ನುವುದಕ್ಕೆ ಕಾದು ನೋಡಬೇಕಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications