ಸತತ ಶ್ರಮ, ನಿಸ್ವಾರ್ಥ ಮನಸ್ಸು: ಏಕಾಂಗಿಯಾಗಿ ಸಾರ್ವಜನಿಕ ರಸ್ತೆ ನಿರ್ಮಿಸಿದ ಕಾರ್ಕಳದ ಶ್ರಮ ಜೀವಿ
ಉಡುಪಿ, ಮೇ 16: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಮಾಳ ಎಂಬಲ್ಲಿಯ ವ್ಯಕ್ತಿಯೊಬ್ಬರು ತಮ್ಮ ಪರೋಪಕಾರದ ಮನೋಭಾವನೆಯಿಂದ ಹಗಲಿರುಳು ಶ್ರಮಿಸಿ ಜನರಿಗಾಗಿ ರಸ್ತೆ ನಿರ್ಮಿಸುವ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.
ಬಿಹಾರದ ದಶರಥ ಮಾಂಜಿ ಯಾರಿಗೆ ಗೊತ್ತಿಲ್ಲ ಹೇಳಿ, ರಸ್ತೆ ಇಲ್ಲದೆ ಪತ್ನಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗದೇ ಪರ್ವತವನ್ನೇ ಕಡಿದು ರಸ್ತೆ ನಿರ್ಮಿಸಿದ ಮಹಾನುಭಾವ. ಇದು ಬಿಹಾರದ ದಶರಥ ಮಾಂಜಿಯಾದರೆ ಕಾರ್ಕಳದಲ್ಲೂ ಕೂಡ ದಶರಥ ಮಾಂಜಿ ಹೋಲುವ ಪರೋಪಕಾರದ ಕೆಲಸವನ್ನು ಮಾಡಿದ್ದಾರೆ.

ಮಾಳ ಗ್ರಾಮದ ಪೇರಡ್ಕ ಗಿರಿಜನ ಕಾಲೋನಿ ನಿವಾಸಿ ಗೋವಿಂದ ಮಲೆಕುಡಿಯ ಅವರು ತಮ್ಮ ಕಾಲೋನಿಗೆ ಸಂಪರ್ಕಿಸಲು ಸರಿಯಾದ ರಸ್ತೆ ಇಲ್ಲದ್ದನ್ನು ಅರಿತು ಸ್ವತಃ ತಾವೇ ಹಾರೆ ಪಿಕ್ಕಾಸಿ ಹಿಡಿದು ರಸ್ತೆ ಮಾಡುವ ಮೂಲಕ ಪರರಿಗೆ ಉಪಕಾರಿಯಾಗಿದ್ದಾರೆ. ಹಾರೆ-ಪಿಕ್ಕಾಸಿ ಹಿಡಿದು ನಿತ್ಯ ಶ್ರಮದಾನ, ಸುಮಾರು 500 ಮೀಟರ್ ರಸ್ತೆ ದುರಸ್ತಿ, ಸರ್ಕಾರದ ಕೆಲಸವನ್ನು ತಾನೇ ನಿರ್ವಹಿಸಿದ ಉದಾರಿ ಗೋವಿಂದ ಮಲೆಕುಡಿಯ ಅವರು.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಿರಿಜನ ಕಾಲೋನಿ ಪೇರಡ್ಕದಲ್ಲಿ ಸುಮಾರು 25ಕ್ಕೂ ಮಿಕ್ಕಿದ ಮನೆಗಳಿವೆ. ಆದರೆ ಅದನ್ನು ಸಂಪರ್ಕಿಸಲು ಸುಂದರವಾದ ರಸ್ತೆಯೇ ಇಲ್ಲ. ಅಗಲ ಕಿರಿದಾದ, ವಾಹನ ಸಂಚಾರಕ್ಕೆ ಅಯೋಗ್ಯವಾದ, ಕೇವಲ ಕಾಲ್ನಡಿಗೆ ಸೀಮಿತವಾಗಿದ್ದ ರಸ್ತೆಯ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜವಾಗಿಲ್ಲ.

ಕೊನೆಗೆ ಬೇಸತ್ತು ತಾವೇ ರಸ್ತೆ ನಿರ್ಮಿಸಲು ಗೋವಿಂದ ಮಲೆಕುಡಿಯ ಮುಂದಾಗಿದ್ದರು. ಗಿರಿಜನ ಕಾಲೋನಿಯ ಬುಗಟುಗುಂಡಿ ಒಂದನೇ ವಾರ್ಡ್ ರಸ್ತೆವರೆಗೆ ಒಟ್ಟು ರಸ್ತೆಯ ಸುಮಾರು ಒಂದೂವರೆ ಕಿಲೋ ಮೀಟರ್ವರೆಗೆ ಅವರೇ ಸ್ವಂತ ಶ್ರಮ ವಹಿಸಿ ರಸ್ತೆ ನಿರ್ಮಿಸಿಕೊಟ್ಟಿದ್ದಾರೆ. ಜೊತೆಗೆ ಮಳೆಗಾಲದಲ್ಲಿ ನೀರು ಸರಾಗವಾಗಿ ಸಾಗಲು ಚರಂಡಿ ವ್ಯವಸ್ಥೆಯನ್ನು ಕೂಡ ಅವರೇ ಮಾಡಿದ್ದಾರೆ.
ಪರಿಸರ ಪ್ರೇಮಿಯಾಗಿರುವ ಗೋವಿಂದ ಮಲೆಕುಡಿಯ ಪ್ರಸ್ತುತ 55ರ ವರ್ಷ ವಯಸ್ಸಾಗಿದೆ. ಕಳೆದ ಮೂವತ್ತು ವರ್ಷಗಳಿಂದ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದು, ಅರಣ್ಯ ಇಲಾಖೆಯ ಜೊತೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಗಿಡನೆಟ್ಟು ಪೋಷಿಸಿ ಬೆಳೆಸುತ್ತಿದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಗೋವಿಂದ ಮಲೆಕುಡಿಯ ಅವರು ರಸ್ತೆ ನಿರ್ಮಿಸಿರುವುದಕ್ಕೆ ಸಾರ್ವಜನಿಕರ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸದ್ಯ ಗಿರಿಜನ ಕಾಲೋನಿ ಪೇರಡ್ಕದಲ್ಲಿ ಮಣ್ಣಿನ ರಸ್ತೆ ನಿರ್ಮಾಣವಾಗಿದ್ದು, ಈ ರಸ್ತೆಯನ್ನು ಡಾಂಬರೀಕರಣ ಮಾಡಿ ಅಭಿವೃದ್ಧಿಪಡಿಸಬೇಕು ಎಂದು ಸ್ಥಳೀಯರು ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಒತ್ತಾಯಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications