ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ: ಪ್ರಕರಣದ ಮೊದಲ ತಲೆದಂಡ
ಉಡುಪಿ, ಜುಲೈ 25: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿ ಬೆಳೆಯುತ್ತಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದೆ. ನಕಲಿ ಪರಶುರಾಮನ ಮೂರ್ತಿ ಸ್ಥಾಪನೆ ಆರೋಪದ ತನಿಖೆ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಲಾಗಿದೆ.
ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಥೀಂ ಪಾರ್ಕ್ ಮತ್ತು ಪರಶುರಾಮನ ಭವ್ಯ ಮೂರ್ತಿ ಲೋಕಾರ್ಪಣೆ ಮಾಡಿದ್ದರು. ನಂತರ ದಿನಗಳಲ್ಲಿ ಕಾಮಗಾರಿ ಬಾಕಿ ಇದೆ ಎನ್ನುವ ಕಾರಣಕ್ಕೆ ಥೀಂ ಪಾರ್ಕ್ಗೆ ಪ್ರವಾಸಿಗರ ನಿಷೇಧ ಹೇರಲಾಗಿತ್ತು.

ಇದು ಸ್ಥಳೀಯರಿಗೆ ಅನುಮಾನ ಮೂಡಿಸಿದ ಪರಿಣಾಮ ತನಿಖೆ ನಡೆಸಿದಾಗ ಮೂರ್ತಿ ಅಸಲಿಯತ್ತು ಹೊರಬಿದ್ದಿತ್ತು. ಹಿತ್ತಾಳೆ ಮೂರ್ತಿಯ ಬದಲು ಫೈಬರ್ ಮೂರ್ತಿ ಸ್ಥಾಪನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಬಳಿಕ ಕಾರ್ಕಳದ ಪರಶುರಾಮ ಥೀಂ ಪಾರ್ಕ್ನ ಪರಶುರಾಮ ಮೂರ್ತಿ ಏಕಾಏಕಿ ಕಾಣೆಯಾಗಿತ್ತು. ಈ ಕುರಿತು ಸ್ಥಳೀಯರು ಹಾಗೂ ಕಾಂಗ್ರೆಸ್ ಮುಖಂಡರು ವಿರೋಧ ವ್ಯಕ್ತಪಡಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.
ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿ ಸಿಒಡಿ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications