ಇಂದು ಉಪ ಚುನಾವಣೆ ಫಲಿತಾಂಶ ಪ್ರಕಟ: ಸಂಭ್ರಮಾಚರಣೆಗೆ ಅವಕಾಶವಿಲ್ಲ
ಉಡುಪಿ, ಮೇ 2: ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಇಂದು (ಭಾನುವಾರ) ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಬೊಮ್ಮಾಯಿ, ಸ್ಥಳೀಯ ವಿಚಾರದಲ್ಲಿ ಚುನಾವಣೆ ನಡೆದಿದೆ. ರಾಜ್ಯ, ದೇಶಮಟ್ಟದ ಚುನಾವಣೆ ನಡೆದಿಲ್ಲ. ಈ ಫಲಿತಾಂಶ ಸರ್ಕಾರದ ಮೇಲಿನ ಜನಾದೇಶ ಅಲ್ಲ ಎಂದು ತಿಳಿಸಿದರು.

ಇನ್ನು ಇದೇ ವೇಳೆ ಕೊರೊನಾ 2ನೇ ಅಲೆ ಭಯಾನಕವಾಗಿದ್ದು, ಜನ ಜಾಗೃತಿ ಆಗಲೇಬೇಕಿದೆ. ಒಬ್ಬನಿಂದ ಹಲವರಿಗೆ ಸೋಂಕು ಹರಡುತ್ತಿದ್ದು, ಜನ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸರಕಾರ ಹಾಗೂ ಜಿಲ್ಲಾಡಳಿತ ಜನತೆಯ ಜೊತೆ ಇದೆ ಎಂದರು.
ರಾಜ್ಯದಲ್ಲಿ ಜನತಾ ಲಾಕ್ ಡೌನ್ ಇದ್ದು, ಇನ್ನಷ್ಟು ಕಠಿಣ ಮಾಡುವ ಅವಶ್ಯಕತೆ ಇದೆ. ಜನರ ಸಹಕಾರದಿಂದ ಮಾತ್ರ ಇದು ಯಶಸ್ವಿ ಆಗುತ್ತದೆ. ಈ ಜನತಾ ಲಾಕ್ ಡೌನ್ ರಿಸಲ್ಟ್ ಬರಲು 15 ದಿನ ಬೇಕು. ಬೆಂಗಳೂರು ಮತ್ತು ಮೈಸೂರಿನಲ್ಲಿ ಕಠಿಣ ಕಾನೂನು ಅಗತ್ಯ ಇದೆ ಎಂದು ತಿಳಿಸಿದರು.
ಆದೇಶ ಘೋಷಣೆಯಾದ 10-12ನೇ ದಿನ ತಜ್ಞರು ಸಭೆ ಸೇರುತ್ತಾರೆ, ಜನಪ್ರತಿನಿಧಿಗಳು ತಜ್ಞರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಂತರ ಎಲ್ಲವನ್ನು ಸಮಗ್ರವಾಗಿ ನೋಡಿಕೊಂಡು ತೀರ್ಮಾನ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications