ಕಾಪು: ಮದುವೆಗೂ ಮುನ್ನ ಮತ ಚಲಾಯಿಸಿದ ನವ ವಧು
ಉಡುಪಿ, ಮೇ 10: ಮತದಾನ ದೇಶದ ಪ್ರತಿಯೊಬ್ಬರ ಹಕ್ಕು. ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ತಮ್ಮ ನಾಯಕರನ್ನು ಆರಿಸುವ ಹಕ್ಕು ಅರ್ಹತೆ ಹೊಂದಿದ ಪ್ರತಿಯೊಬ್ಬ ಪ್ರಜೆಗಿದೆ. ಕರ್ನಾಟಕದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೂಡ ರಾಜ್ಯಕ್ಕೆ ಸೂಕ್ತ ಸರ್ಕಾರ ಆರಿಸಲು ಇಂದು ಮೇ 10ರಂದು ಮತದಾನ ಮಾಡಬೇಕಿದೆ.
ಈಗಾಗಲೇ ರಾಜ್ಯಾದ್ಯಂತ ಮತದಾನ ಭರದಿಂದ ಸಾಗುತ್ತಿದ್ದು, ನವ ವಧು ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಪು ವಿಧಾನಸಭಾ ಕ್ಷೇತ್ರದ ಮೆಲಿಟಾ ಎನ್ನುವವರು ಮದುವೆಗೆ ಶೃಂಗಾರಗೊಂಡೇ ಪಲಿಮಾರು ಗ್ರಾಮ ಪಂಚಾಯತ್ ಅವರಾಲು ಮಟ್ಟು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ಬಳಿಕ ಮೆಲಿಟಾ ಮತಗಟ್ಟೆಯಿಂದ ಚರ್ಚ್ಗೆ ತೆರಳಿದ್ದಾರೆ.
ಮದುವೆಯ ವಿಶೇಷ ದಿನದಂದೂ ಕೂಡ ಮತದಾನದ ಕರ್ತವ್ಯ ಮರೆಯದ ಮೆಲಿಟಾ ಅವರಿಗೆ ಚುನಾವಣಾ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಮದುವೆಗೂ ಮುನ್ನ ಮತದಾನ ಮಾಡಿದ ಮಧುಮಗಳು
ಚಿಕ್ಕಮಗಳೂರು: ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು, ಪುರುಷರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಮಧುಮಗಳು ಹಸೆಮಣೆ ಏರುವ ಮೊದಲು ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಯವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ. ಮೂಡಿಗೆರೆಯ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು ಅವರ ಮಗಳಾದ ಸುಶ್ಮಿತಾ ಅವರ ವಿವಾಹವು ಬುಧವಾರ ಮೂಡಿಗೆರೆ ರೈತ ಭವನದಲ್ಲಿ ನಡೆಯಲಿದ್ದು, ಮಧುಮಗಳು ಶೃಂಗಾರಗೊಂಡು ಮಾಕೋನ ಹಳ್ಳಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಿದರು. ನಂತರ ಮದುವೆ ಮಂಟಪಕ್ಕೆ ಆಗಮಿಸಿದರು. ಮತದಾನದ ನಂತರ ಮದುವೆಗೆ ತೆರಳಿ ಮತದಾನದ ಮಹತ್ವವನ್ನು ಸಾರಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications