ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು, ಮೊಯ್ಲಿ ವಿರುದ್ದ ಭಾರೀ ಆಕ್ರೋಶ
ಉಡುಪಿ, ಏ 16: ಟಿಕೆಟ್ ಹಂಚಿಕೆ ವಿಚಾರವಾಗಿ ಸೋಮವಾರ (ಏ 16) ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿಯವರ ಪ್ರತಿಕೃತಿ ದಹಿಸಿದ್ದಾರೆ.
ವೀರಪ್ಪ ಮೊಯ್ಲಿ 'ಹಠಾವೋ ಕಾಂಗ್ರೆಸ್ ಬಚಾವೋ' ಸ್ಲೋಗನ್ ಮೂಲಕ ತವರಿನಲ್ಲೇ ಮೊಯ್ಲಿಯವರಿಗೆ ಕಾಂಗ್ರೆಸ್ ಕಾರ್ಯಕರ್ತರು ಶಾಕ್ ಕೊಟ್ಟಿದ್ದಾರೆ. ಭಾನುವಾರ ಬಿಡುಗಡೆಯಾದ ಕಾಂಗ್ರೆಸ್ ಪಟ್ಟಿಯಲ್ಲಿ ಮಾಜಿ ಶಾಸಕ ಗೋಪಾಲ್ ಭಂಡಾರಿಯವರಿಗೆ ಕಾರ್ಕಳದಿಂದ ಟಿಕೆಟ್ ನೀಡಲಾಗಿತ್ತು.
ಇದರಿಂದ ಇಲ್ಲಿನ ಇನ್ನೋರ್ವ ಪ್ರಬಲ ಆಕಾಂಕ್ಷಿಯಾಗಿದ್ದ ಉದಯಕುಮಾರ್ ಶೆಟ್ಟಿ ಬೆಂಬಲಿಗರಿಗೆ ಭಾರೀ ನಿರಾಸೆ ಆಗಿದೆ. ಸೋಮವಾರ, ಪ್ರತಿಭಟನೆ ನಡೆಸಿದ ಶೆಟ್ಟಿ ಬೆಂಬಲಿಗರ ಸಂಪೂರ್ಣ ಕೋಪ ಕಾಂಗ್ರೆಸ್ ಮುಖಂಡ ಮೊಯ್ಲಿ ವಿರುದ್ಧ ತಿರುಗಿಬಿದ್ದಿತ್ತು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಮೊಯ್ಲಿಯವರಿಂದಾಗಿಯೇ ಉದಯ್ ಕುಮಾರ್ ಶೆಟ್ಟರಿಗೆ ಟಿಕೆಟ್ ತಪ್ಪಿದೆ ಎಂಬುದು ಕಾರ್ಯಕರ್ತರ ಆರೋಪವಾಗಿದೆ. ಹೀಗಾಗಿ ಇವತ್ತಿನ ಪ್ರತಿಭಟನೆಯ ಉದ್ದಕ್ಕೂ ಮೊಯಿಲಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಯಿತು. ಉದಯಕುಮಾರ್ ಶೆಟ್ಟಿಯವರ ಬೆಂಬಲಿಗರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ಗೋಪಾಲ್ ಭಂಡಾರಿಯವರ ಕಚೇರಿ ಎದುರು ವೀರಪ್ಪ ಮೊಯ್ಲಿಲಿಯವರ ಪ್ರತಿಕೃತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ದಹಿಸಿದರು. ಮೊಯ್ಲಿಲಿಯವರ ಅಣಕು ಶವಯಾತ್ರೆ ನಡೆಸಿ ಅಸಮಾಧಾನ ಹೊರ ಹಾಕಿದ್ದಾರೆ. ಮುಂದೆ ಓದಿ..

ಗೋಪಾಲ್ ಭಂಡಾರಿಯವರ ಜೊತೆಗೂ ಮಾತನಾಡಿದ್ದೇನೆ
ಈ ವೇಳೆ ಮಾತನಾಡಿದ ಟಿಕೆಟ್ ಆಕಾಂಕ್ಷಿ ಉದಯಕುಮಾರ್ ಶೆಟ್ಟಿ , ಇನ್ನೂ ಕಾಲ ಮಿಂಚಿಲ್ಲ. ಗೋಪಾಲ್ ಭಂಡಾರಿಯವರ ಜೊತೆಗೂ ಮಾತನಾಡಿದ್ದೇನೆ. ಕಾರ್ಯಕರ್ತರ ಬೆಂಬಲ ನನಗಿದೆ. ಪಕ್ಷವನ್ನು ಕಟ್ಟಿ ಬೆಳೆಸಿದ ನನಗೆ ಟಿಕೆಟ್ ನೀಡದೇ ಇದ್ದುದು ಬೆಂಬಲಿಗರಿಗೆ ಬೇಸರವಾಗಿದೆ ಎಂದು ಹೇಳಿದರು.

ಪ್ರಾರಂಭದಲ್ಲೇ ವೀರಪ್ಪ ಮೊಯ್ಲಿ ಆಕ್ಷೇಪ
ಗುತ್ತಿಗೆದಾರರೂ ಆಗಿರುವ ಉದಯಕುಮಾರ್ ಶೆಟ್ಟಿ ಬಗ್ಗೆ ಪ್ರಾರಂಭದಲ್ಲೇ ವೀರಪ್ಪ ಮೊಯ್ಲಿ ಆಕ್ಷೇಪ ಎತ್ತಿದ್ದರು. ತಮ್ಮ ಪುತ್ರ ಹರ್ಷ ಮೊಯ್ಲಿ ಟಿಕೆಟ್ ಪಡೆಯಲು ಅಡ್ಡಗಾಲು ಹಾಕಿದ್ದ ಉದಯಕುಮಾರ್ ಶೆಟ್ಟಿ ವಿರುದ್ಧ ಮೊಯಿಲಿ ತೀವ್ರ ಅಸಮಾಧಾನಗೊಂಡಿದ್ದರು. ಮಾತ್ರವಲ್ಲ, ಶತಾಯಗತಾಯ ಉದಯಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಲು ಮೊಯ್ಲಿಲಿಯವರು ದೆಹಲಿ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದರು. ಈ ಕುರಿತು 'ಒನ್ ಇಂಡಿಯಾ'ದಲ್ಲಿ ವಿಸ್ತೃತ ವದರಿ ಪ್ರಕಟವಾಗಿತ್ತು.

ವೀರಪ್ಪ ಮೊಯಿಲಿಯವರ ಶಿಷ್ಯ ಮತ್ತು ಎರಡು ಬಾರಿ ಕಾರ್ಕಳದ ಶಾಸಕ
ಮಾಜಿ ಶಾಸಕ ಗೋಪಾಲ್ ಭಂಡಾರಿ ,ವೀರಪ್ಪ ಮೊಯಿಲಿಯವರ ಶಿಷ್ಯ ಮತ್ತು ಎರಡು ಬಾರಿ ಕಾರ್ಕಳದ ಶಾಸಕರಾಗಿದ್ದವರು. ಈ ಕಳೆದ ಚುನಾವಣೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ವಿರುದ್ಧ ಭಂಡಾರಿ ಪರಾಭವಗೊಂಡಿದ್ದರು.
ಹೀಗಾಗಿ ಈ ಸಲ ಉದಯಕುಮಾರ್ ಶೆಟ್ಟಿ ತಮಗೇ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದುದು ಸಹಜ. ಆದರೆ, ಮೊಯ್ಲಿ ಹೈಕಮಾಂಡ್ ಅಂಗಳದಲ್ಲಿ ಗೋಪಾಲ್ ಭಂಡಾರಿಯವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಉದಯಕುಮಾರ್ ಶೆಟ್ಟಿ ಬಣ ಈಗ ತೀವ್ರ ಅಸಮಾಧಾನಗೊಂಡಿದೆ.

ಕಾಂಗ್ರೆಸ್ ಹಿರಿಯ ಮುಖಂಡ ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿಯವರು ಮಾಜಿ ಶಾಸಕ ಗೋಪಾಲ್ ಭಂಡಾರಿಯವರಿಗೆ ಟಕೆಟ್ ಕೊಡಿಸಲು ಇನ್ನಿಲ್ಲದ ಲಾಬಿ ಮಾಡಿದ್ದರು. ತಮ್ಮ ಪುತ್ರನಿಗೆ ಸಿಗದಿದ್ದರೂ ಚಿಂತೆ ಇಲ್ಲ. ಆದ್ರೆ ಇನ್ನೋರ್ವ ಪ್ರಬಲ ಆಕಾಂಕ್ಷಿ ಗುತ್ತಿಗೆದಾರ ಮುನಿಯಾಲು ಉದಯಕುಮಾರ್ ಶೆಟ್ಟರಿಗೆ ಟಿಕೆಟ್ ಸಿಗದಂತೆ ಮಾಡಲು ಮೊಯ್ಲಿಯವರು ಇನ್ನಿಲ್ಲದ ಹರಸಾಹಸ ಪಡುತ್ತಿದ್ದ ಸುದ್ದಿ ಗೌಪ್ಯವಾಗಿ ಏನೂ ಉಳಿದಿರಲಿಲ್ಲ.

ಮೊಯ್ಲಿ ಗುಂಪು ಮತ್ತು ಉದಯಕುಮಾರ್ ಶೆಟ್ಟಿ ಬಣ ಹೀಗೆ ಎರಡು ಗುಂಪು
ಹೀಗಾಗಿ ಕಾರ್ಕಳದಲ್ಲೀಗ ಮೊಯ್ಲಿ ಗುಂಪು ಮತ್ತು ಉದಯಕುಮಾರ್ ಶೆಟ್ಟಿ ಬಣ ಹೀಗೆ ಎರಡು ಗುಂಪುಗಳಾಗಿವೆ. ಮೊದಲೇ ತಾಲೂಕಿನಲ್ಲಿ ಸೊರಗಿದ್ದ ಕಾಂಗ್ರೆಸ್ ಗೆ ಇದು ದುಬಾರಿಯಾಗಿ ಪರಿಣಮಿಸುತ್ತಾ? ಕಾಂಗ್ರೆಸ್ ನ ಗುಂಪುಗಾರಿಕೆಯ ಲಾಭವನ್ನು ಬಿಜೆಪಿ ಪಡೆಯುತ್ತಾ? ಸ್ವಕ್ಷೇತ್ರದಲ್ಲೇ ಮೊಯ್ಲಿಲಿಗೆ ಮುಖಭಂಗವಾಗುತ್ತಾ ಎಂಬುದು ಮೇ ಹದಿನೈದರಂದು ಗೊತ್ತಾಗಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications