ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್

|
Google Oneindia Kannada News

ಉಡುಪಿ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಕರಾವಳಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ರಾಜ್ಯ ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ರಾಜ್ ನಾಥ್ ಸಿಂಗ್ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡರು.

ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಕುಮಾರ್ ನಾಮಪತ್ರ ಸಲ್ಲಿಕೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ ನಾಥ್ ಸಿಂಗ್ ಪಾಲ್ಗೊಂಡರು.

karnataka-elections-rajnath-singh-visit-shri-krishna-mutt

ನಂತರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ತೆರಳಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿ ಸಂಜೆ ಉಡುಪಿಗೆ ಆಗಮಿಸಿದರು. ಮಣಿಪಾಲದ ಖಾಸಗಿ ಹೋಟೇಲ್ ನಲ್ಲಿ ಏರ್ಪಡಿಸಿದ್ದ 'ಚಿಂತನ-ಮಂಥನ' ಸಂವಾದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು.

ಟೌಮ್ಸ್‌ ನೌ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆಟೌಮ್ಸ್‌ ನೌ ಸಮೀಕ್ಷೆ: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ

ಬಳಿಕ ಕೃಷ್ಣ ಮಠಕ್ಕೆ ಆಗಮಿಸಿದ ರಾಜ್ ನಾಥ್ ಸಿಂಗ್ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧಿಪತಿ ಫಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ರಾಜ್ ನಾಥ್ ಸಿಂಗ್ ಅವರನ್ನು ಮಠದ ವತಿಯಿಂದ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

'ಸಂವಿಧಾನ ಉಳಿಸಿ' ಕಾಂಗ್ರೆಸ್ ನ ಹೊಸ ನಾಟಕ ಎಂದ ಅಮಿತ್ ಶಾ!'ಸಂವಿಧಾನ ಉಳಿಸಿ' ಕಾಂಗ್ರೆಸ್ ನ ಹೊಸ ನಾಟಕ ಎಂದ ಅಮಿತ್ ಶಾ!

English summary
central home minister Rajnath singh visited Karkala of Udupi district. Rajnath singh doing campaign for BJP candidate Sunil Kumar in Karkala. Then he visited Shri Krishna mattu in Udupi and seek blessing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X