ಚಿತ್ರಗಳು; ಕೊಲ್ಲೂರು ದೇವಾಲಯಕ್ಕೆ ರಾಜ್ಯಪಾಲರ ಭೇಟಿ
ಉಡುಪಿ, ಡಿಸೆಂಬರ್ 03; ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದರು. ದೇವಾಲಯದ ವತಿಯಿಂದ ರಾಜ್ಯಪಾಲರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು. ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯಕ್ಕೆ ಪ್ರದಕ್ಷಿಣೆ ಮಾಡಿ ದೇವರ ಚಿನ್ನದ ರಥ ವೀಕ್ಷಿಸಿದರು.
ರಾಜ್ಯಪಾಲರ ಜೊತೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಗುರುವಾರ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಗೆ ರಾಜ್ಯಪಾಲರು ಆಗಮಿಸಿದ್ದರು. ಧರ್ಮಸ್ಥಳದಲ್ಲಿ ಚಪ್ಪಲಿ ಧರಿಸದೇ ಬರಿಗಾಲಿನಲ್ಲಿಯೇ ನಡೆದು ಗಮನ ಸೆಳೆದಿದ್ದರು.

ಉಡುಪಿ ಮಠಕ್ಕೆ ರಾಜ್ಯಪಾಲರ ಭೇಟಿ
ಶುಕ್ರವಾರ ಮುಂಜಾನೆ ರಾಜ್ಯಪಾಲರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ರಾಜ್ಯಪಾಲರನ್ನು ಗೌರವಿಸಿದರು. ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಸತ್ಯದೇವತೆಯ ದರ್ಶನ ಮಾಡಿದ್ದರು
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಕ್ಷಿಣ ಕನ್ನಡ ಜಿಲ್ಲೆಯ ಕಾರಣಿಕ ಶಕ್ತಿಯ ದರ್ಶನ ಮಾಡಿದ್ದರು. ಧರ್ಮಸ್ಥಳದಿಂದ ಉಡುಪಿಗೆ ಪ್ರಯಾಣಿಸುವ ವೇಳೆ ಅವರು ಅಳದಂಗಡಿಯ ಸತ್ಯದೇವತೆಯ ದರ್ಶನ ಮಾಡಿದ್ದು, ಕಾರಣಿಕ ಶಕ್ತಿಯ ದರ್ಶನ ಮಾಡಿದ ಗಣ್ಯರ ಪಾಲಿಗೆ ಸೇರಿದ್ದರು. ಧರ್ಮಸ್ಥಳದಲ್ಲಿ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿದ ಬಳಿಕ ರಾಜ್ಯಪಾಲರು ಬಳಿಕ ಉಡುಪಿಗೆ ತೆರಳಿದ್ದರು. ಅಳದಂಗಡಿ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ, ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದ್ದರು.

ಹಲವು ಗಣ್ಯರ ಆಗಮನ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಿಂದ 13 ಕಿ. ಮೀ. ದೂರದಲ್ಲಿ ಅಳದಂಗಡಿ ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನವಿದೆ. ಕಾರಣಿಕ ಶಕ್ತಿಯಿಂದೇ ಪ್ರಸಿದ್ದ ಪಡೆದ ಈ ದೈವ ಕನ್ನಡ ಹಲವು ಖ್ಯಾತನಾಮರ ಇಷ್ಟಾರ್ಥ ಸಿದ್ಧಿ ಮಾಡಿದೆ. ನಟ ದರ್ಶನ್, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಖ್ಯಾತನಾಮರೂ ಈ ಹಿಂದೆ ಕಷ್ಟ ಬಂದಾಗ ದೈವಕ್ಕೆ ಕೋಲ ಸೇವೆಯನ್ನು ಒಪ್ಪಿಸಿ ಹರಕೆ ತೀರಿಸಿದ್ದರು.
Recommended Video

ಬರಿಗಾಲಲ್ಲಿ ನಡೆದ ರಾಜ್ಯಪಾಲರು
ಧರ್ಮಸ್ಥಳದಲ್ಲಿ ಗುರುವಾರ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಗೂ ಮುನ್ನ ದೇವಳದಿಂದ ಸಮ್ಮೇಳನ ನಡೆಯುವ ಅಮೃತವರ್ಷಿಣಿ ಸಭಾಭವನದವರೆಗೆ ಅತಿಥಿಗಳನ್ನು ಮೆರವಣಿಗೆಯಲ್ಲಿ ಕರೆತರೋದು ಕ್ಷೇತ್ರದ ವಾಡಿಕೆ. ಆದರೆ ಭಧ್ರತೆ ಕಾರಣಕ್ಕೆ ರಾಜ್ಯಪಾಲರನ್ನು ಕಾರಿನಲ್ಲಿ ಸಭಾ ಭವನಕ್ಕೆ ತೆರಳಲು ವಿನಂತಿಸಿದರೂ ಅದಕ್ಕೊಪ್ಪದ ರಾಜ್ಯಪಾಲರು ನಡೆದುಕೊಂಡೇ ಮೆರವಣಿಗೆಯಲ್ಲಿ ಸಾಗಿದ್ದರು. ಈ ವೇಳೆ ಚಪ್ಪಲಿ ಧರಿಸಲೂ ನಿರಾಕರಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications