ಉಡುಪಿಯಲ್ಲಿ ಕರ್ನಾಟಕದ ಮೊದಲ ತೇಲುವ ಸೇತುವೆ ಇಂದು ಲೋಕಾರ್ಪಣೆ
ಉಡುಪಿ ಮೇ 6: ಪ್ರವಾಸೋದ್ಯಮಕ್ಕೆ ಹೆಸರಾದ ಉಡುಪಿಯಲ್ಲಿ ಕರ್ನಾಟಕದ ಮೊದಲ ತೇಲುವ ಸೇತುವೆ ಇಂದು ಲೋಕಾರ್ಪಣೆಗೊಳ್ಳಲಿದೆ. ಈ ಸೇತುವೆಯ ಮೇಲೆ ಇರುವಾಗ, ಸಂದರ್ಶಕನು ಸಮುದ್ರದ ಅಲೆಗಳ ಚಲನೆಯನ್ನು ಅನುಭವಿಸಬಹುದು ಮತ್ತು ಅದರ ಮೇಲೆ ನಡಿಗೆಯನ್ನು ಆನಂದಿಸಬಹುದು.
ಇದರ ಅನುಭವ ಅಲೆಗಳ ಮೇಲೆ ಸವಾರಿ ಮಾಡಿದಂತೆ ಇರುತ್ತದೆ. ಈ ತೇಲುವ ಸೇತುವೆ ಒಂದು ರೀತಿಯಲ್ಲಿ ಸಾಹಸ ಕ್ರೀಡೆಯಾಗಿದ್ದು, ಗಟ್ಟಿ ಗುಂಡಿಗೆ ಇರುವ ಯಾರು ಬೇಕಾದರೂ ಇದರ ಮೇಲೆ ನಡೆಯಬಹುದು. ಇದರ ಕೆಳಗೆ ಬರುವ ಸಣ್ಣ ಮತ್ತು ದೊಡ್ಡ ಅಲೆಗಳು ಸೇತುವೆಯನ್ನು ಮೇಲಕ್ಕೆತ್ತಿ ಕೆಳಕ್ಕಿಳಿಸುತ್ತವೆ. ಅಲೆಯ ರಭಸದ ನವನವೀನ ಅನುಭ ಇದು ನೀಡಲಿದ್ದು ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಇನ್ನಷ್ಟು ಪ್ರವಾಸಿಗರನ್ನು ಸೆಳೆಯುತ್ತಿದೆ.
ರಾಜ್ಯದ ಮೊದಲ ತೇಲುವ ಸೇತುವೆ ಶುಕ್ರವಾರ (ಮೇ 6) ಉಡುಪಿಯ ಮಲ್ಪೆ ಬೀಚ್ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅವರ ಸಮ್ಮುಖದಲ್ಲಿ ಸಂಜೆ 5ಗಂಟೆಗೆ ಸೇತುವೆ ಉದ್ಘಾಟನೆಗೊಳ್ಳಲಿದೆ ಎಂದು ಮಲ್ಪೆ ಬೀಚ್ನ ಗುತ್ತಿಗೆದಾರ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಸೇತುವೆ ಹೆಚ್ಚುವರಿ ಆಕರ್ಷಣೆಯಾಗಲಿದೆ. ಸ್ಥಳೀಯ ಮೂವರು ಉದ್ಯಮಿಗಳು ಸೇರಿ 80 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಈ ಸೇತುವೆ 100 ಮೀ. ಉದ್ದವಿದೆ. 3.5 ಮೀಟರ್ ಅಗಲ ವಿಸ್ತೀರ್ಣವನ್ನು ಹೊಂದಿದೆ.

ಈ ತೇಲುವ ಸೇತುವೆ ಮೇಲೆ ಹೋಗಲು ಪ್ರತಿ ವ್ಯಕ್ತಿ 100 ಪಾವತಿಸಬೇಕು ಮತ್ತು ಲೈಫ್ ಜಾಕೆಟ್ ಧರಿಸಿ 15 ನಿಮಿಷಗಳ ಕಾಲ ಸೇತುವೆಯ ಮೇಲೆ ನಡೆಯಬಹುದು. ಪ್ರವಾಸಿಗರ ಸುರಕ್ಷತೆಗಾಗಿ ಸೇತುವೆಯ ಮೇಲೆ 10 ಲೈಫ್ ಗಾರ್ಡ್ಗಳು ಮತ್ತು 30 ಲೈಫ್ಬಾಯ್ ರಿಂಗ್ಗಳು ಇರುತ್ತವೆ. ಸೇತುವೆಯ ಮೇಲೆ ಇರುವಾಗ ಸಮುದ್ರದ ಅಲೆಗಳ ಚಲನೆಯನ್ನು ಅನುಭವಿಸಬಹುದು ಮತ್ತು ಅವನ ನಡಿಗೆಯನ್ನು ಆನಂದಿಸಬಹುದು. ಅಲೆಗಳ ಮೇಲೆ ಸವಾರಿ ಮಾಡಿದಂತೆ ಅನುಭವವಾಗುತ್ತದೆ.
Recommended Video
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications