SSLC Result: ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೈಂದೂರಿನ ಸುರಭಿ ಶೆಟ್ಟಿ
ಉಡುಪಿ, ಆಗಸ್ಟ್ 10: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸುರಭಿ ಎಸ್. ಶೆಟ್ಟಿಯು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.
Recommended Video
625ಕ್ಕೆ 624 ಅಂಕ ಗಳಿಸುವ ಮೂಲಕ ಸುರಭಿ ಶೆಟ್ಟಿ ಕಲಿತ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾಳೆ. ಸುರಭಿಯು ಬೈಂದೂರಿನ ಸಾಂದೀಪಿನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ.
ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುರಭಿ, 625ಕ್ಕೆ 625 ಅಂಕವನ್ನೂ ನಿರೀಕ್ಷೆ ಮಾಡಿದ್ದೆ. ಆದರೆ ಒಂದು ವಿಷಯದಲ್ಲಿ ಅಂಕ ಕಡಿಮೆ ಬಂದಿದೆ ಎಂದು ಹೇಳಿದಳು.

ಕಡಿಮೆ ಅಂಕ ಬಂದ ವಿಷಯವನ್ನು ಮರುಮೌಲ್ಯಮಾಪನಕ್ಕೆ ಕಳಿಸುವ ಯೋಚನೆ ಇದ್ದು, ಅದಕ್ಕೂ ಮುನ್ನ ಶಿಕ್ಷಕರ ಸಲಹೆಯನ್ನು ಪಡೆಯುತ್ತೇನೆ. ಈ ಸಾಧನೆಯಿಂದ ಬಹಳ ಖುಷಿಯಾಗಿದೆ ಎಂದು ತಿಳಿಸಿದಳು.
ಈ ಸಂದರ್ಭದಲ್ಲಿ ನನ್ನ ಹೆತ್ತವರು ಮತ್ತು ಶಿಕ್ಷಕರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಮುಖ್ಯವಾಗಿ ನನ್ನ ಸ್ನೇಹಿತೆಗೆ ಧನ್ಯವಾದ ಹೇಳಲೇಬೇಕು. ಲಾಕ್ ಡೌನ್ ಸಮಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಎಕ್ಸ್ ಚೇಂಜ್ ಮಾಡಿ ನಾನು ಮತ್ತು ಸ್ನೇಹಿತೆ ಒಟ್ಟಿಗೇ ಅಭ್ಯಾಸ ಮಾಡಿದ್ದೇವೆ. ನನ್ನ ಸಾಧನೆಯಲ್ಲಿ ಮುಖ್ಯೋಪಾಧ್ಯಾಯರ ಪಾಲು ಹೆಚ್ಚು ಇದೆ ಎಂದು ಪ್ರತಿಕ್ರಿಯೆ ನೀಡಿದಳು.

625ಕ್ಕೆ 623 ಅಂಕ ಪಡೆದ ಕೋಲಾರದ ವಿದ್ಯಾರ್ಥಿನಿ
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕೋಲಾರದ ಚಿನ್ಮಯಿ ಶಾಲೆಯ ವಿದ್ಯಾರ್ಥಿನಿ ರಚನಾ.ಕೆ 625ಕ್ಕೆ 623 ಅಂಕ ಪಡೆದಿದ್ದಾಳೆ. ತಂದೆ ಕೃಷ್ಣಪ್ಪ ಕೆ.ಎಸ್.ಆರ್.ಟಿ.ಸಿ ನಿರ್ವಾಹಕನಾಗಿದ್ದು, ತಾಯಿ ಗೀತಾ ಗೃಹಿಣಿಯಾಗಿದ್ದಾರೆ. ದಿನಕ್ಕೆ ಮೂರರಿಂದ ನಾಲ್ಕು ಗಂಟೆಗಳ ಕಾಲ ಓದುತ್ತಿದ್ದ ವಿದ್ಯಾರ್ಥಿನಿ ರಚನಾ, ಮುಂದೆ ವೈದ್ಯೆ ಆಗಲು ಕನಸು ಕಟ್ಟಿಕೊಂಡಿದ್ದಾಳೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications