ಅಲೆಗಳ ಮೇಲೆ ವಾಂಕಿಂಗ್; ಮಲ್ಪೆಯ ತೇಲುವ ಸೇತುವೆ ವಿಶೇಷ
ಉಡುಪಿ, ಮೇ 06; ಭೋರ್ಗರೆಯುವ ಕಡಲ ಅಲೆ ನೋಡೋಕೆ ಚಂದ. ಹತ್ತಿರ ಹೋದರೆ ರೌದ್ರ ಭಯಂಕರ. ಆದರೆ ಇನ್ನು ಮುಂದೆ ಕಡಲ ಅಲೆಗೆ ಹೆದರಬೇಕಾಗಿಲ್ಲ. ಅಲೆಗಳ ಮೇಲೆಯೇ ನಡೆದುಕೊಂಡೇ ಹೋಗಬಹುದು.
ಹೌದು ಇಂತಹ ಅದ್ಭುತ ಅವಕಾಶ ಉಡುಪಿ ಮಲ್ಪೆ ಕಡಲ ಕಿನಾರೆಯಲ್ಲಿ ಕಲ್ಪಿಸಲಾಗಿದೆ. ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಇಂತಹ ಪ್ರಯೋಗಕ್ಕೆ ಉಡುಪಿ ಸಾಕ್ಷಿಯಾಗಿದೆ. ಹೊಸ ಪ್ರಯೋಗ ಸಾಹಸಿಗಳನ್ನು ಸೆಳೆಯುತ್ತಿದೆ.
ಉಡುಪಿಯ ಮಲ್ಪೆ ಬೀಚಿಗೆ ಹೊಸ ಆಕರ್ಷಣೆ ಸೇರ್ಪಡೆಯಾಗಿದೆ. ಈ ಸೇರ್ಪಡೆ ಕಡಲ ತಡಿಯ ಮೆರುಗು ಹೆಚ್ಚಿಸಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಸಮುದ್ರದ ಅಲೆಗಳ ಮೇಲೆ ನಡೆದು ಸಾಗುವಂತಹ ತೇಲುವ ಸೇತುವೆ ಉದ್ಘಾಟನೆಯಾಗಿದೆ.

ಕೇರಳದ ಬೇಕೂರು ಕಡಲ ತೀರದಲ್ಲಿ ಹಾಕಲಾದ ತೇಲುವ ಸೇತುವೆ ಮಾದರಿಯಲ್ಲೇ ರಾಜ್ಯದ ಉಡುಪಿಯ ಮಲ್ಪೆಯಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವಿರುವ ತೇಲುವ ಸೇತುವೆ ಇದಾಗಿದ್ದು, ಸಮುದ್ರದ ಅಲೆಗಳ ಮೇಲೆ ನಡೆದು ಸಾಗುವ ಅನುಭವವನ್ನು ಇದು ನೀಡುತ್ತದೆ.
ತೇಲುವ ಸೇತುವೆ ವಿಶೇಷ; ಸಮುದ್ರದ ದಡದಿಂದ ತೆರೆಗಳ ನಡುವೆ ನಿರ್ಮಾಣವಾಗಿರುವ ಈ ಸೇತುವೆ, ನೀರಿನಲ್ಲಿ ತೇಲುವ ಮಾದರಿಯಲ್ಲಿ ನಿರ್ಮಾಣವಾಗಿದೆ. ಇದರ ಮೇಲೆ ನಡೆದು ಸಮುದ್ರದಲ್ಲಿ ನೂರು ಮೀಟರ್ ವರೆಗೂ ನಡೆದು ಸಾಗುವ ಮೂಲಕ ತೇಲುವ ಸೇತುವೆ ಅನುಭವವನ್ನು ಪ್ರವಾಸಿಗರು ಪಡೆದುಕೊಳ್ಳಬಹುದಾಗಿದೆ.
ಈ ಸೇತುವೆಯ ಮೇಲೆ ನಡೆದು ಸಾಗುವ ಪ್ರವಾಸಿಗರು ಅಲೆಗಳ ರಭಸಕ್ಕೆ ಸಮುದ್ರಕ್ಕೆ ಬೀಳದಂತೆ ತಡೆಯಲು ಸೇತುವೆಯ ಎರಡು ಬದಿಗಳಲ್ಲಿ ರೇಲಿಂಗ್ಸ್ ಕೂಡ ಅಳವಡಿಸಲಾಗಿದೆ. ಮಲ್ಪೆಯ ಈ ಸೇತುವೆಗೆ ಧನಂಜಯ ಕಾಂಚನ್, ಶೇಖರ್ ಪುತ್ರನ್, ಸುದೇಶ್ ಶೆಟ್ಟಿ ಎಂಬ ಮೂರು ಮಂದಿ ಪಾಲುದಾರರಿದ್ದು 80 ಲಕ್ಷ ಖರ್ಚು ಮಾಡಲಾಗಿದೆ.

ಈ ಸೇತುವೆಗೆ ಹೆಚ್ಚಿನ ಸಾಂಧ್ರತೆಯ ಪೊಂಟೋನ್ಸ್ ಬಾಕ್ಸ್ಗಳನ್ನು ಹಾಕಲಾಗಿದೆ. ಒಂದೇ ಬಾರಿ ನೂರು ಜನರು ಈ ಸೇತುವೆ ಮೇಲೆ ಸಾಗಬಹುದಾಗಿದೆ. ಒಬ್ಬರಿಗೆ 15 ನಿಮಿಷ ಗಳ ಕಾಲ ಕಳೆಯಲು ಅವಕಾಶ ನೀಡಲಾಗಿದೆ. ಒಬ್ಬರು 100 ರೂ. ಟಿಕೆಟ್ಗೆ ಪಾವತಿ ಮಾಡಬೇಕು.
ಸೇತುವೆ ಇಕ್ಕೆಲಗಳಲ್ಲಿ 10 ಮಂದಿ ಲೈಫ್ ಗಾರ್ಡ್ ಗಳಿದ್ದು ಅವಘಡಗಳಾದರೂ ರಕ್ಷಣೆಗೆ ಸರ್ವ ಸನ್ನದ್ಧರಾಗಿರುತ್ತಾರೆ. ಈ ಸೇತುವೆಯ ಮೇಲೆ ಉಡುಪಿ ಶಾಸಕ ರಘುಪತಿ ಭಟ್, ಉದ್ಯಮಿ ಜಿ. ಶಂಕರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ವಾಕ್ ಮಾಡಿ ಸೇತುವೆಗೆ ಚಾಲನೆ ನೀಡಿದರು.
ಒಟ್ಟಿನಲ್ಲಿ ರಾಜ್ಯದಲ್ಲಿ ಮೊದಲ ಫ್ಲೋಟಿಂಗ್ ಬ್ರಿಡ್ಜ್ ನಿರ್ಮಾಣ ಆಗಿದ್ದು ಮಳೆಗಾಲ ಆರಂಭವಾಗುವ ಮೊದಲು ಉಡುಪಿಗೆ ಹೋದರೆ ಮಲ್ಪೆಯ ಈ ಸೇತುವೆ ಮೇಲೆ ಹೋಗಲು ಮಾತ್ರ ಮರಿಯಬೇಡಿ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications