ಸೌದಿ ಅರೇಬಿಯಾದಲ್ಲಿ ಡಿಎಲ್ ಪಡೆದ ಮೊದಲ ಕನ್ನಡತಿ ಡಾ. ವಾಣಿಶ್ರೀ
ಉಡುಪಿ, ಡಿಸೆಂಬರ್ 21: ಕನ್ನಡತಿಯೊಬ್ಬರು ಕೊಲ್ಲಿ ರಾಷ್ಟ್ರ ಸೌದಿ ಅರೇಬಿಯಾದಲ್ಲಿ ಪ್ರಥಮ ಬಾರಿಗೆ ವಾಹನ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪರವಾನಗಿ ಪಡೆದುಕೊಂಡಿದ್ದಾರೆ.
ಸೌದಿ ಅರೇಬಿಯಾದಲ್ಲಿ ಮಹಿಳೆಯರಿಗಿದ್ದ ವಾಹನ ಚಾಲನಾ ನಿಷೇಧ ತೆರವುಗೊಂಡ ಬಳಿಕ ಇದೇ ಮೊದಲಬಾರಿಗೆ ಅಲ್ಲಿನ ಚಾಲನಾ ಪರೀಕ್ಷೆಯಲ್ಲಿ ಕನ್ನಡತಿಯೊಬ್ಬರು ಉತ್ತೀರ್ಣರಾಗಿ ಪ್ರಥಮ ಬಾರಿಗೆ ಪರವಾನಗಿ ಪಡೆದುಕೊಂಡಿದ್ದಾರೆ.
ಮೂಲತಃ ಕುಂದಾಪುರ ಆಲ್ಬಾಡಿ ನಿವಾಸಿ ಡಾ. ವಾಣಿಶ್ರೀ ಸೌದಿ ಅರೇಬಿಯಾದಲ್ಲಿ ಚಾಲನಾ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಡಾ ವಾಣಿಶ್ರೀ ಪ್ರಸ್ತುತ ಪತಿ ಹಾಗೂ ಇಬ್ಬರು ಪುತ್ರರೊಂದಿಗೆ ಸೌದಿ ಅರೇಬಿಯಾ ರಾಜಧಾನಿ ರಿಯಾದ್ನಲ್ಲಿ ಕಳೆದ 15ವರ್ಷಗಳಿಂದ ನೆಲೆಸಿದ್ದಾರೆ.
ದಂತವೈದ್ಯೆ ಯಾಗಿರುವ ಡಾ.ವಾಣಿಶ್ರೀ ಸಂತೋಷ್ ಶೆಟ್ಟಿ ನವೆಂಬರ್ 21ರಂದು ವಾಹನ ಚಾಲನಾ ಪರವಾನಗಿ ಪಡೆದುಕೊಂಡಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದಲ್ಲಿ ಡಿ ಎಲ್ ಪಡೆದ ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸೌದಿ ಅರೇಬಿಯಾದಲ್ಲಿ ಚಾಲನಾ ಪರೀಕ್ಷೆ ಪಾಸ ಮಾಡುವುದು ಅಷ್ಟು ಸಲಭವಲ್ಲ. ಸೌದಿಯ ಚಾಲನಾ ಪರೀಕ್ಷೆ ಭಾರೀ ಕಠಿಣವಾಗಿದ್ದು, ಭಾರತೀಯ ಚಾಲಕರಿಗೆ ಸವಾಲಾಗಿದೆ. ಚಾಲನಾ ಕೌಶಲವನ್ನು ಸಂಪೂರ್ಣವಾಗಿ ಡಿಜಿಟಲ್ ಪ್ರಕ್ರಿಯೆಯಲ್ಲಿ ದಾಖಲಿಸುವ ವ್ಯವಸ್ಥೆ ಅಲ್ಲಿದೆ. ಆ ಬಳಿಕವಷ್ಟೆ ವಿವಿಧ ಮಾನದಂಡಗಳನ್ನು ಅನುಸರಿಸಿ ಪರವಾನಗಿಗೆ ಶಿಫಾರಸು ಮಾಡಲಾಗುತ್ತದೆ.
ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರು ವಾಹನ ಚಲಾಯಿಸುವುದನ್ನು ನಿಷೇಧಿಸಿದ್ದ ಸೌದಿ ಅರೇಬಿಯಾದಲ್ಲಿ ನಿಷೇಧ ತೆರವಿಗೆ ನಿರಂತರ ಹೋರಾಟ ನಡೆಯುತ್ತಿತ್ತು. ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಆಲ್-ಸೌದ್ ರೂಪಿಸಿದ 'ಮಿಷನ್ 2030' ಎಂಬ ಯೋಜನೆ ಅಂಗವಾಗಿ ಮಹಿಳಾ ಸಬಲೀಕರಣದ ಪ್ರಮುಖ ಹೆಜ್ಜೆಯಾಗಿ ದೇಶದ ಮಹಿಳೆಯರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಐತಿಹಾಸಿಕ ನಿರ್ಧಾರವನ್ನು 2017 ಸೆಪ್ಟೆಂಬರ್ನಲ್ಲಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಈಗ ಸೌದಿಯಲ್ಲಿ ಮಹಿಳೆಯರು ಕಾರ್ ಗಳನ್ನು ರಸ್ತೆಗೆ ಇಳಿಸಿದ್ದಾರೆ.
ಒಂದು ವೇಳೆ ಮಹಿಳಾ ಚಾಲಕರನ್ನೊಳಗೊಂಡ ವಾಹನಗಳು ಅಪಘಾತಕ್ಕೆ ಗುರಿಯಾದ ಸಂದರ್ಭ ತನಿಖೆ ನಡೆಸುವುದಕ್ಕಾಗಿ ಮಹಿಳಾ ಇನ್ಸ್ಟೆಕ್ಟರ್ ಗಳನ್ನು ನೇಮಿಸಲಾಗಿದೆ. ಖಾಸಗಿ ವಿಮಾ ಕಂಪನಿ ಮೂಲಕ ನೇಮಕಗೊಳಿಸಿ ಅವರಿಗೆ ತರಬೇತಿ ನೀಡಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ವಾಹನ ವಾಲನೆಯ ಪರವಾನಗಿ ಪಡೆದಿದರುವ ವಾಣಿಶ್ರೀ ಶೆಟ್ಟಿ ಪತಿ ಸಂತೋಷ್ ಶೆಟ್ಟಿ ಸೌದಿಯಲ್ಲಿನ ಕರಾವಳಿ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿದ್ದು,ಸೌದಿಯಲ್ಲಿರುವ ಕನ್ನಡಿಗರನ್ನು ಒಟ್ಟು ಸೇರಿಸಿ ಕನ್ನಡ ರಾಜ್ಯೋತ್ಸವ, ರಕ್ತದಾನ,ಯೋಗ ಶಿಬಿರ, ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘದ ಮೂಲಕ ಆಯೋಜಿಸುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications