ಕಾಶೀ ಮಠಾಧೀಶರ ಚಾತುರ್ಮಾಸ ವ್ರತ ಉಡುಪಿಯಲ್ಲಿ ಆರಂಭ
ಉಡುಪಿ, ಜುಲೈ 23: ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಕೋಟದಲ್ಲಿ ಆರಂಭವಾಗಿದೆ.
ವಿಕಾರಿ ನಾಮ ಸಂವತ್ಸರದ ಚಾತುರ್ಮಾಸ ಸ್ವೀಕಾರಾರ್ಥವಾಗಿ ಕೋಟಾ ಶ್ರೀ ಕಾಶೀಮಠದಲ್ಲಿ ಪ್ರಾತಃಕಾಲದಲ್ಲಿ ದೇವತಾ ಪ್ರಾರ್ಥನೆ, ರಕ್ಷತ್ರಯ ಹವನ, ಸಾನಿಧ್ಯ ಹವನವು ವಿವಿಧ ಗೋತ್ರೆಯ ವೈದಿಕ ವೃಂದದವರ ನೇತೃತ್ವದಲ್ಲಿ ನಡೆಯಿತು.
ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀವ್ಯಾಸ ರಘುಪತಿ ನರಸಿಂಹ ದೇವರಿಗೆ ವಿಶೇಷ ಪಂಚಾಮೃತ ಗಂಗಾಭಿಷೇಕ, ಪವಮಾನ ಅಭಿಷೇಕ, ಶತಕಲಶಾಭಿಷೇಕ, ಕನಕಾಭಿಷೇಕಗಳು ಶ್ರೀಗಳವರ ದಿವ್ಯಹಸ್ತಗಳಿಂದ ನೆರವೇರಿದವು. ಬಳಿಕ ತಪ್ತ ಮುದ್ರಾಧಾರಣೆಯನ್ನು ಸ್ವೀಕರಿಸಿದ ಶ್ರೀಗಳು, ಸಮಾಜದ ಶಿಷ್ಯವೃಂದಕ್ಕೆ ತಪ್ತ ಮುದ್ರಾಧಾರಣೆ ನಡೆಸಿ ಅನುಗ್ರಹಿಸಿದರು,

ಮಧ್ಯಾಹ್ನ ಪೂಜೆ ಮತ್ತು ಮೃತಿಕೆಯನ್ನು ಪೂಜಿಸಿ ಶ್ರೀಗಳು ಚಾತುರ್ಮಾಸ ವ್ರತ ಸ್ವೀಕರಿಸಿದರು. ರಾತ್ರಿ ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು ಆಶಿರ್ವಚನವಿತ್ತು, ಗೌಡ ಸಾರಸ್ವತ ಸಮಾಜದಲ್ಲಿ ಹಿಂದಿನಿಂದಲೂ ನಡೆದು ಬಂದ ಪ್ರತಿಯೊಂದು ಆಚಾರ-ವಿಚಾರ, ಸಂಸ್ಕಾರಗಳು ಅತ್ಯಮೂಲ್ಯವಾಗಿದ್ದು ಅದನ್ನು ಸಮಾಜ ಬಾಂಧವರು ಮುಂದುವರಿಸುವಂತೆ ತಿಳಿಸಿದರು.
ಹಾಗೇಯೆ ಸಮಾಜದಲ್ಲಿ ದೇವಭಕ್ತಿ,ಗುರುಭಕ್ತಿ ಅತ್ಯಂತ ಅನುಕರಣೀಯವಾಗಿದ್ದು ಇದು ಇತರ ಸಮಾಜದವರಿಗೂ ಅನುಕರಣೀಯವಾಗಿದೆ ಎಂದು ಶ್ರೀಗಳು ಹೇಳಿದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಮಠ, ಮಂದಿರಗಳ ಮೊಕ್ತೇಸರರು, ಆಡಳಿತ ಮಂಡಳಿಯ ಪ್ರತಿನಿಧಿಗಳು ಚಾತುರ್ಮಾಸ ವೃತ ಸ್ವೀಕರಿಸಿದ ದಿನದಂದು ಶ್ರೀಗಳವರಿಗೆ ಹಾರಾರ್ಪಣೆಗೈದು ಪುನೀತರಾದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಚಾತುರ್ಮಾಸ ಸಮಿತಿಯ ದಾಮೋದರ ಶೆಣೈ ಕುಂದಾಪುರ, ವೆಂಕಟೇಶ ಹರಿಪ್ರಭು, ರಮೇಶ್ ಪಡಿಯಾರ್, ನರಸಿಂಹ ಪ್ರಭು, ಕೆ.ರಾಧಾಕೃಷ್ಣ, ವಾಸುದೇವ ನಾಯಕ್, ವೇದವ್ಯಾಸ ಪೈ, ಶ್ರೀಕಾಂತ್ ಶೆಣೈ, ಅರವಿಂದ ಭಟ್ ಉಪಸ್ಥಿತರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications