ಶಿರೂರು ಶ್ರೀಗಳ ಮರಣದ ಬಗ್ಗೆ ಕೆಎಂಸಿಯಿಂದ ಪತ್ರಿಕಾ ಹೇಳಿಕೆ
Recommended Video

ಮಣಿಪಾಲ, ಜುಲೈ 19: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳು ಗುರುವಾರ ಬೆಳಗ್ಗೆ ಕೊನೆಯುಸಿರೆಳಿದಿದ್ದಾರೆ. ಸ್ವಾಮೀಜಿಗಳನ್ನು ಆಸ್ಪತ್ರೆಗೆ ಸೇರಿದಾಗಿನಿಂದ ಮೃತಪಟ್ಟ ತನಕದ ಆರೋಗ್ಯ ತಪಾಸಣೆ ಮಾಹಿತಿಯನ್ನು ಆಸ್ಪತ್ರೆ ಇಂದು ಪ್ರಕಟಿಸಿದೆ.
'ಶ್ರೀರೂರು ಶ್ರೀಗಳು ವಿಷ ಸೇವಿಸಿರುವುದು ನಿಜ, ಫುಡ್ ಪಾಯ್ಸನ್ ಇರಬಹುದು ಅಥವಾ ಬಲವಂತ ವಿಷ ಪ್ರಾಶನವಾಗಿರಬಹುದು, ಈ ಸಮಯಕ್ಕೆ ಯಾವುದನ್ನು ಖಚಿತವಾಗಿ ಹೇಳಲಾಗದು, ಪೊಲೀಸರ ಕಣ್ಗಾವಲಿನಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ನಂತರ ಈ ಬಗ್ಗೆ ತಿಳಯಲಿದೆ ' ಎಂದು ಕೆಎಂಸಿ ಡಾ. ಅವಿನಾಶ್ ಶೆಟ್ಟಿ ಅವರು ಶುಕ್ರವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆಗೂ ಮುನ್ನ ತಕ್ಷಣದ ಪ್ರತಿಕ್ರಿಯೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದಾದ ಬಳಿಕ ಕೆಎಂಸಿ ಹೊರಡಿಸಿರುವ ಅಧಿಕೃತ ಪತ್ರಿಕಾ ಹೇಳಿಕೆ ಇಲ್ಲಿದೆ:
ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರನ್ನು ಮಣಿಪಾಲ್ ನ ಕಸ್ತೂರ್ಬಾ ಆಸ್ಪತ್ರೆಗೆ ಜುಲೈ 18, 2018ರ ಮಧ್ಯರಾತ್ರಿ 1.05 ಗಂಟೆ ಸುಮಾರಿಗೆ ಕರೆತರಲಾಗಿದೆ. ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಅವರನ್ನು ಇಲ್ಲಿಗೆ ಕರೆ ತಂದಾಗ ವಿಷಮ ಪರಿಸ್ಥಿತಿಯಲ್ಲಿದ್ದರು. ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ ಇತ್ತು. ಇದಕ್ಕೂ ಮುನ್ನ ಅವರಿಗೆ ಅಮಶಂಕೆ ತೊಂದರೆ ಇತ್ತು. ತಕ್ಷಣದ ಚಿಕಿತ್ಸೆ ನೀಡಿ ಅವರನ್ನು ಅಡ್ಮಿಟ್ ಮಾಡಿಕೊಳ್ಳಲಾಯಿತು.

ಕಸ್ತೂರ್ಬಾ ಆಸ್ಪತ್ರೆಯ ತಜ್ಞ ವೈದ್ಯರು, ನೆಫ್ರೋಲಾಜಿ, ಗ್ಯಾಸ್ಟ್ರೋಎಂಟೆರೋಲೊಜಿಸ್ಟ್, ತುರ್ತು ನಿಗಾ ಪರಿಸ್ಥಿತಿ ತಜ್ಞರ ಅಭಿಪ್ರಾಯದಂತೆ, ವೆಂಟಿಲೇಟರ್ ವ್ಯವಸ್ಥೆ ಒದಗಿಸಲಾಯಿತು. ಡಯಾಲಿಸಸ್ ಹಾಗೂ ರಕ್ತ ಶುದ್ಧಿ ಕಾರ್ಯ ಕೈಗೊಳ್ಳಲಾಯಿತು.
ಆಹಾರ ವಿಷವಾಗಿ ದೇಹ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಸಂಶ್ಯ ಬಂದಿದ್ದರಿಂದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಯಿತು. ಆದರೆ, ಸ್ವಾಮೀಜಿಗಳ ದೇಹ ಪರಿಸ್ಥಿತಿ ನಿಯಂತ್ರಣಕ್ಕೆ ಸಿಗಲಿಲ್ಲ, ನಮ್ಮ ವೈದ್ಯಕೀಯ ತಂಡದ ಸತತ ಪ್ರಯತ್ನದ ನಡುವೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ 8.30ರ ಸುಮಾರಿಗೆ ಅವರು ಮೃತರಾದರು ಎಂದು ತಿಳಿಸುತ್ತೇವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications