ಶಿರೂರು ಶ್ರೀಗಳ ಮರಣದ ಬಗ್ಗೆ ಕೆಎಂಸಿಯಿಂದ ಪತ್ರಿಕಾ ಹೇಳಿಕೆ
Recommended Video

ಮಣಿಪಾಲ, ಜುಲೈ 19: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳು ಗುರುವಾರ ಬೆಳಗ್ಗೆ ಕೊನೆಯುಸಿರೆಳಿದಿದ್ದಾರೆ. ಸ್ವಾಮೀಜಿಗಳನ್ನು ಆಸ್ಪತ್ರೆಗೆ ಸೇರಿದಾಗಿನಿಂದ ಮೃತಪಟ್ಟ ತನಕದ ಆರೋಗ್ಯ ತಪಾಸಣೆ ಮಾಹಿತಿಯನ್ನು ಆಸ್ಪತ್ರೆ ಇಂದು ಪ್ರಕಟಿಸಿದೆ.
'ಶ್ರೀರೂರು ಶ್ರೀಗಳು ವಿಷ ಸೇವಿಸಿರುವುದು ನಿಜ, ಫುಡ್ ಪಾಯ್ಸನ್ ಇರಬಹುದು ಅಥವಾ ಬಲವಂತ ವಿಷ ಪ್ರಾಶನವಾಗಿರಬಹುದು, ಈ ಸಮಯಕ್ಕೆ ಯಾವುದನ್ನು ಖಚಿತವಾಗಿ ಹೇಳಲಾಗದು, ಪೊಲೀಸರ ಕಣ್ಗಾವಲಿನಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ನಂತರ ಈ ಬಗ್ಗೆ ತಿಳಯಲಿದೆ ' ಎಂದು ಕೆಎಂಸಿ ಡಾ. ಅವಿನಾಶ್ ಶೆಟ್ಟಿ ಅವರು ಶುಕ್ರವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆಗೂ ಮುನ್ನ ತಕ್ಷಣದ ಪ್ರತಿಕ್ರಿಯೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದಾದ ಬಳಿಕ ಕೆಎಂಸಿ ಹೊರಡಿಸಿರುವ ಅಧಿಕೃತ ಪತ್ರಿಕಾ ಹೇಳಿಕೆ ಇಲ್ಲಿದೆ:
ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರನ್ನು ಮಣಿಪಾಲ್ ನ ಕಸ್ತೂರ್ಬಾ ಆಸ್ಪತ್ರೆಗೆ ಜುಲೈ 18, 2018ರ ಮಧ್ಯರಾತ್ರಿ 1.05 ಗಂಟೆ ಸುಮಾರಿಗೆ ಕರೆತರಲಾಗಿದೆ. ಇದಕ್ಕೂ ಮುನ್ನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಅವರನ್ನು ಇಲ್ಲಿಗೆ ಕರೆ ತಂದಾಗ ವಿಷಮ ಪರಿಸ್ಥಿತಿಯಲ್ಲಿದ್ದರು. ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ ಇತ್ತು. ಇದಕ್ಕೂ ಮುನ್ನ ಅವರಿಗೆ ಅಮಶಂಕೆ ತೊಂದರೆ ಇತ್ತು. ತಕ್ಷಣದ ಚಿಕಿತ್ಸೆ ನೀಡಿ ಅವರನ್ನು ಅಡ್ಮಿಟ್ ಮಾಡಿಕೊಳ್ಳಲಾಯಿತು.

ಕಸ್ತೂರ್ಬಾ ಆಸ್ಪತ್ರೆಯ ತಜ್ಞ ವೈದ್ಯರು, ನೆಫ್ರೋಲಾಜಿ, ಗ್ಯಾಸ್ಟ್ರೋಎಂಟೆರೋಲೊಜಿಸ್ಟ್, ತುರ್ತು ನಿಗಾ ಪರಿಸ್ಥಿತಿ ತಜ್ಞರ ಅಭಿಪ್ರಾಯದಂತೆ, ವೆಂಟಿಲೇಟರ್ ವ್ಯವಸ್ಥೆ ಒದಗಿಸಲಾಯಿತು. ಡಯಾಲಿಸಸ್ ಹಾಗೂ ರಕ್ತ ಶುದ್ಧಿ ಕಾರ್ಯ ಕೈಗೊಳ್ಳಲಾಯಿತು.
ಆಹಾರ ವಿಷವಾಗಿ ದೇಹ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಸಂಶ್ಯ ಬಂದಿದ್ದರಿಂದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಯಿತು. ಆದರೆ, ಸ್ವಾಮೀಜಿಗಳ ದೇಹ ಪರಿಸ್ಥಿತಿ ನಿಯಂತ್ರಣಕ್ಕೆ ಸಿಗಲಿಲ್ಲ, ನಮ್ಮ ವೈದ್ಯಕೀಯ ತಂಡದ ಸತತ ಪ್ರಯತ್ನದ ನಡುವೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ 8.30ರ ಸುಮಾರಿಗೆ ಅವರು ಮೃತರಾದರು ಎಂದು ತಿಳಿಸುತ್ತೇವೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications