ಮಣಿಪಾಲ್ ಸಂಸ್ಥೆ ಅಕ್ರಮ: ಸಾವಿರಾರು ಕೋಟಿ ದಂಡ
ಮಣಿಪಾಲ್, ಜೂ.25: ಶೈಕ್ಷಣಿಕ ಉದ್ದೇಶಕ್ಕಾಗಿ ಸರಕಾರ ಕೊಟ್ಟ ಭೂಮಿಯನ್ನು ದುರುಪಯೋಗ ಮಾಡಿದ ಆರೋಪದ ಮೇಲೆ ಮಣಿಪಾಲ್ ಸಂಸ್ಥೆಗೆ ಸಾವಿರಾರು ಕೋಟಿ ರೂ ದಂಡ ವಿಧಿಸಲಾಗಿದೆ. ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಂಡ ಕೆಎಂಸಿಗೆದಂಡ ವಿಧಿಸಿ ಗುರುವಾರ ಆದೇಶ ದೊರಡಿಸಿದವರು ಉಡುಪಿ ಜಿಲ್ಲಾಧಿಕಾರಿ ಆರ್ ವಿಶಾಲ್.
ಉಡುಪಿಯಲ್ಲಿರುವ ಮಣಿಪಾಲ್ ಸಂಸ್ಥೆಗೆ ಸೇರಿರುವ ವಿದ್ಯಾರ್ಥಿ ನಿಲಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆರ್ ಟಿಐ ಅರ್ಜಿ ಸಲ್ಲಿಸಲಾಗಿತ್ತು. ಸುಮಾರು 17 ಅಂತಸ್ತಿನ ಕಟ್ಟಡ ಅಕ್ರಮವಾಗಿ ನಿರ್ಮಿಸಿದ್ದು, ಈ ಕಟ್ಟಡದಲ್ಲಿ ಎನ್ನಾರೈ ಲೇಡಿಸ್ ಹಾಸ್ಟೆಲ್ ಇದೆ. ಈ ವಿವಾದಿತ ಭೂಮಿ ಗ್ರೀನ್ ಬೆಲ್ಟ್ ನಲ್ಲಿದೆ ಎಂದು ಆರ್ ಟಿಐ ಕಾಯಕರ್ತ ಯೋಗೇಶ್ ಶೇಠ್ ಆರೋಪಿಸಿದ್ದಾರೆ.

ಅಕ್ರಮ ಬಯಲಾಗಿದ್ದು ಹೇಗೆ?: ಆರ್ ಟಿಐ ಅರ್ಜಿ ಮೊದಲಿಗೆ ಕಂದಾಯ ಇಲಾಖೆ ತಲುಪಿದೆ. ಕಂದಾಯ ಇಲಾಖೆ ಕೆಎಂಸಿಗೆ ಸರ್ಕಾರದಿಂದ ಮಂಜೂರಾದ ಭೂಮಿಯ ದಾಖಲೆ ಪರಿಶೀಲಿಸಿದೆ.
ಅದರಂತೆ, 1968ನೇ ಇಸವಿಯಲ್ಲಿ ಆಗಿನ ಸರ್ಕಾರ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಭೂಮಿಯನ್ನು ನೀಡಲಾಗಿತ್ತು. ಅದರೆ, ಕೆಎಂಸಿಗೆ ಮಂಜೂರಾದ 200 ಎಕರೆ ಭೂಮಿಯಲ್ಲಿ ಸುಮಾರು 68 ಎಕರೆ ಮಾತ್ರ ಶೈಕ್ಷಣಿಕ ಉದ್ದೇಶಕ್ಕೆ ಬಳಸಿಕೊಂಡು ಮಿಕ್ಕ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕೆ ಉಪಯೋಗಿಸಿದ್ದಾರೆ.
ಈ ಕಟ್ಟಡಕ್ಕೆ 2011 ಉಡುಪಿ ಪುರಸಭೆ (ಬಿಜೆಪಿ ಸರ್ಕಾರವಿದ್ದ ಕಾಲ) ಅನುಮತಿ ನೀಡಿತ್ತು. ಕಟ್ಟಡ ನಿರ್ಮಾಣದಲ್ಲಿ ನಿಯಮಗಳನ್ನು ಮೀರಲಾಗಿದೆ ಎಂದು 2014ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಪುರಸಭೆ ಎರಡು ಬಾರಿ ನೋಟಿಸ್ ಜಾರಿ ಮಾಡಿತ್ತು. ಲೈಸನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಅದರೆ, ಯಾವುದಕ್ಕೂ ಮಣಿಪಾಲ್ ಸಂಸ್ಥೆ ಪ್ರತಿಕ್ರಿಯಿಸಿರಲಿಲ್ಲ.
ಈಗ ಆರೋಪದ ಬಗ್ಗೆ ಕಂದಾಯ ಇಲಾಖೆ ಕ್ರಮ ಜರುಗಿಸುವ ಮುನ್ನ ಉಡುಪಿ ಜಿಲ್ಲಾಧಿಕಾರಿಗಳಿಗೆ ವಿವರಣೆ ನೀಡಿದೆ. ನಂತರ ಜಿಲ್ಲಾಧಿಕಾರಿ ಆರ್ ವಿಶಾಲ್ ಅವರು 1,123 ಕೋಟಿ ರು ದಂಡ ವಿಧಿಸಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications