ರಸ್ತೆ ಅಪಘಾತದಲ್ಲಿ ಕೆಎಂಎಫ್ ನಿರ್ದೇಶಕ ರಾಜೀವ ಶೆಟ್ಟಿ ಸಾವು
ಉಡುಪಿ, ಡಿಸೆಂಬರ್ 9: ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಬುಧವಾರ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಹಾಲಾಡಿ ಬಳಿ ರಸ್ತೆ ಅಪಘಾತ ನಡೆದಿದ್ದು, ಈ ವೇಳೆ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ.
ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವಾಗ, ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಾಜೀವ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
Recommended Video
Shimoga:
ಗ್ರಾಮದಲ್ಲಿ
ಪತ್ತೆಯಾಯ್ತು
8
ಅಡಿ
ಉದ್ದದ
ಕಾಳಿಂಗ
ಸರ್ಪ!
|
Oneindia
Kannada
ಪ್ರಸ್ತುತ ಕೆಎಂಎಫ್ ನ ನಿರ್ದೇಶಕರಾಗಿರುವ ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣ ತಾಲೂಕು ಪಂಚಾಯತಿಯ ಸದಸ್ಯರಾಗಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments
English summary
Hadduru Rajeev Shetty, director of Dakshina Kannada Cooperative Milk Producers' Union, died in a road accident on Wednesday.