ಕೊಡಗು, ಕೇರಳಕ್ಕೆ ಪರಿಹಾರ ಘೋಷಣೆ ಮಾಡಿದ ಕೊಲ್ಲೂರು ದೇವಾಲಯ

ಉಡುಪಿ, ಆಗಸ್ಟ್ 19 : ಕೊಲ್ಲೂರಿನ ಮೂಕಾಂಬಿಕ ದೇವಾಲಯದ ಆಡಳಿತ ಮಂಡಳಿ ಕೊಡಗು ಮತ್ತು ಕೇರಳ ಪ್ರವಾಹದಲ್ಲಿ ಸಿಲುಕಿ ಮೃತಪಟ್ಟವರಿಗೆ ಶ್ರದ್ದಾಂಜಲಿ ಅರ್ಪಿಸಿದೆ. ಕೇರಳಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸಭೆ ನಡೆಯಿತು. ಕೇರಳ ಮತ್ತು ಕೊಡಗಿನ ಪ್ರವಾಹ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಕಡಿಮೆ ಆಗಲಿ ಎಂದು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Kollur Mookambika temple announced fund for flood effected Kerala and Kodagu

ದೇವಸ್ಥಾನದ ನಿಧಿಯಿಂದ ಕೇರಳ ರಾಜ್ಯಕ್ಕೆ 1 ಕೋಟಿ, ಕೊಡಗು ಜಿಲ್ಲೆಗೆ 25 ಲಕ್ಷ ರೂ. ಬಿಡುಗಡೆಗೆ ಮಂಜೂರಾತಿ ಕೋರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಲ್ಲಿ ಮನವಿ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೊಲ್ಲೂರಿನ ಮೂಕಾಂಬಿಕ ದೇವಾಲಯಕ್ಕೆ ಕರ್ನಾಟಕದ ಜೊತೆಗೆ ಕೇರಳದಲ್ಲೂ ಲಕ್ಷಾಂತರ ಭಕ್ತರಿದ್ದಾರೆ. ಕೇರಳದ ನೂರಾರು ಭಕ್ತರು ಪ್ರತಿದಿನ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದ್ದರಿಂದ, ಕೇರಳಕ್ಕೂ ಪರಿಹಾರ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+