ಕೋಟ ಡಬಲ್ ಮರ್ಡರ್: ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿ ಜೈಲುಪಾಲು
ಉಡುಪಿ, ಫೆಬ್ರವರಿ 11:ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಕೋಟ ಡಬಲ್ ಮರ್ಡರ್ ಪ್ರಕರಣದಲ್ಲಿ ಪೋಲಿಸರೇ ಬಂಧನಕ್ಕೆ ಒಳಗಾದ ಘಟನೆ ನಡೆದಿದೆ. ಜನವರಿ 26ರ ತಡ ರಾತ್ರಿ ನಡೆದ ಡಬಲ್ ಮರ್ಡರ್ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದ ಮೇಲೆ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಈಗ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ ಆಗಿದೆ. ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಪವನ್ ಅಮಿನ್ ಮತ್ತು ವೀರೇಂದ್ರ ಆಚಾರ್ಯ ಎಂಬುವವರನ್ನು ಬಂಧಿಸಲಾಗಿದೆ . ಬಂಧಿತ ಪೊಲೀಸ್ ಸಿಬ್ಬಂದಿಗಳಿಬ್ಬರೂ ಕೊಲೆ ಆರೋಪಿಗಳಿಗೆ ಸಹಕರಿಸಿದ ಆರೋಪದ ಮೇರೆಗೆ ಬಂಧಿಸಲಾಗಿದೆ.
ಪವನ್ ಅಮಿನ್ ಮತ್ತು ವೀರೇಂದ್ರ ಆಚಾರ್ಯ ಕೋಟ ಠಾಣೆ ವ್ಯಾಪ್ತಿಯ ರೌಡಿಗಳಾದ ಹರೀಶ್ ರೆಡ್ದಿ, ರಾಜಶೇಖರ ರೆಡ್ಡಿ ಮತ್ತು ಅವರ ಸಹಚರರೊಂದಿಗೆ ಒಡನಾಟ ಹೊಂದಿದ್ದರು ಎಂದು ಆರೋಪಿಸಲಾಗಿದೆ, ಅಲ್ಲದೇ ಘಟನೆ ನಡೆದ ರಾತ್ರಿ ಕೃತ್ಯ ಎಸಗಿದ ಆರೋಪಿಗಳು ಅವಿತುಕೊಳ್ಳಲು ಪವನ್ ಅಮಿನ್ ಹೆಬ್ರಿಯ ಕುಚ್ಚೂರು ಎಂಬಲ್ಲಿ ತನ್ನ ಮನೆಯಲ್ಲಿ ಅವಕಾಶ ಕಲ್ಪಿಸಿದ್ದ. ಮುಂದೇನಾಯ್ತು ಓದಿ...

ಪವನ್ ಅಮಿನ್ಗೆ ದೂರವಾಣಿ ಕರೆ
ಮರುದಿನ ಬೆಳಗ್ಗೆ ಹರೀಶ್ ರೆಡ್ಡಿಯು ಪವನ್ ಅಮಿನ್ಗೆ ದೂರವಾಣಿ ಕರೆ ಮಾಡಿ ಮೊಬೈಲ್ ಫೋನ್ ಮತ್ತು ಸಿಮ್ ಸಹಿತ ಕೆಲವು ಸಾಮಗ್ರಿಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದ. ಅದರಂತೆ ಅವುಗಳನ್ನು ಪ್ರಣವ್ ಭಟ್ ಎಂಬಾತನ ಮೂಲಕ ಪವನ್ ಅಮಿನ್ ಕಳುಹಿಸಿಕೊಟ್ಟಿದ್ದ ಎಂದು ಹೇಳಲಾಗಿದೆ.

ಸಂಬಂಧಿಕರ ಮನೆಯಲ್ಲಿ ವ್ಯವಸ್ಥೆ
ಕೊಲೆ ನಡೆದ ಜನವರಿ 26ರ ತಡರಾತ್ರಿ ಬಂಧಿತ ಪೊಲೀಸ್ ಸಿಬ್ಬಂದಿಗಳಾದ ಪವನ್ ಅಮಿನ್, ವೀರೇಂದ್ರ ಆಚಾರ್ಯನೊಂದಿಗೆ ಸೇರಿ ಕೊಲೆ ಆರೋಪಿಗಳಿಗೆ ಕಾರಿನ ವ್ಯವಸ್ಥೆ ಮಾಡಿ ಆರೋಪಿಗಳನ್ನು ಆಗುಂಬೆಯ ಎನ್.ಆರ್.ಪುರದ ಮಲ್ಲಂದೂರಿನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ನ್ಯಾಯಾಂಗ ಬಂಧನಕ್ಕೆ
ಪವನ್ ಮತ್ತು ವೀರೇಂದ್ರ ಆಚಾರ್ಯರನ್ನು ಬಂಧಿಸಿ ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್ ಫೋನ್ ಸಹಿತ ಕೆಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬರ್ಬರವಾಗಿ ಕೊಲೆ
ವಿವಾದಕ್ಕೆ ಸಂಬಂಧಿಸಿದಂತೆ ಭರತ್ ಕುಮಾರ್ ಮತ್ತು ಯತೀಶ್ ಎಂಬುವವರನ್ನು ಜನವರಿ 26 ರ ತಡರಾತ್ರಿ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಉಡುಪಿ ಜಿಪಂ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್, ರೌಡಿಶೀಟರ್ ರಾಜಶೇಖರ ರೆಡ್ಡಿ, ಮೆಡಿಕಲ್ ರವಿ, ಹರೀಶ್ ರೆಡ್ಡಿ, ಮಹೇಶ್ ಗಾಣಿಗ, ರವಿಚಂದ್ರ ಪೂಜಾರಿಯನ್ನು ಬಂಧಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications