ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ ಕೋಟಾ ಶ್ರೀನಿವಾಸ ಪೂಜಾರಿ

|
Google Oneindia Kannada News

ಉಡುಪಿ, ನವೆಂಬರ್. 06: ನಟ ಪ್ರಕಾಶ್ ರೈ ಅವರು ಗೌರಿಯ ಮಾನಸಿಕತೆಯಿಂದ ಇನ್ನು ಹೊರಬಂದಿಲ್ಲ. ಆ ಕಾರಣಕ್ಕೆ ಸ್ವಾಮಿ ಅಯ್ಯಪ್ಪ ದೇವರೇ ಅಲ್ಲ ಎಂದು ಪ್ರಕಾಶ್ ರೈ ಹೇಳಿಕೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ.

ದೀಪಾವಳಿ ವಿಶೇಷ ಪುರವಣಿ

ಉಡುಪಿಯಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಯ್ಯಪ್ಪ ದೇವರೇ ಅಲ್ಲ ಎಂದು ಹೇಳಿಕೆ ನೀಡಿರುವ ನಟ ಪ್ರಕಾಶ ರೈ ವಿರುದ್ಧ ವಾಗ್ದಾಳಿ ನಡೆಸಿದರು.

ಟಿಪ್ಪು ಜಯಂತಿ ಆಮಂತ್ರಣದಲ್ಲಿ ಬಿಜೆಪಿ ನಾಯಕರ ಹೆಸರು ಬೇಡ:ಕೋಟಾ ಶ್ರೀನಿವಾಸ ಪೂಜಾರಿಟಿಪ್ಪು ಜಯಂತಿ ಆಮಂತ್ರಣದಲ್ಲಿ ಬಿಜೆಪಿ ನಾಯಕರ ಹೆಸರು ಬೇಡ:ಕೋಟಾ ಶ್ರೀನಿವಾಸ ಪೂಜಾರಿ

ಗೌರಿ ಲಂಕೇಶ್ ಅವರ ಹತ್ಯೆ ನಮಗೆಲ್ಲಾ ನೋವು ತಂದಿದೆ ನಿಜ. ಯಾವ ಹಿಂಸೆಯನ್ನೂ ಸಹಿಸಲು ನಮಗೆ ಸಾಧ್ಯವಿಲ್ಲ. ಆದರೆ ಗೌರಿ ಅವರ ನಿಲುವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಗೌರಿ ಲಂಕೇಶ್ ಹಿಂದೂ ಧರ್ಮ ಧರ್ಮವೇ ಅಲ್ಲ ಅಂದಿದ್ದರು. ಹಿಂದೂ ದೇವರುಗಳು ದೇವರೇ ಅಲ್ಲ ಅಂದಿದ್ದರು . ಗೌರಿಯ ಆ ಮಾನಸಿಕತೆಯಿಂದ ಪ್ರಕಾಶ್ ರೈ ಹೊರ ಬಂದಿಲ್ಲ.

Kota Shrinivas Poojary slams Prakash Raj

ಬುದ್ಧಿಜೀವಿಗಳು, ನಗರ ನಕ್ಸಲರ ಮಾತಿಗೆ ಅವರೇ ಸ್ಪಷ್ಟನೆ ಕೊಡಬೇಕು. ಇತರ ಧರ್ಮಗಳ ವಿಚಾರವನ್ನು ಆಯಾ ಧರ್ಮಗಳು ನಿರ್ಧರಿಸುತ್ತದೆ. ಹಿಂದೂ ಧರ್ಮದ ವಿಚಾರದಲ್ಲಿ ನ್ಯಾಯಾಲಯ, ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಟೀಕಿಸಿದ ಕೋಟಾ ಶ್ರೀನಿವಾಸ ಪೂಜಾರಿ ಅವರು ಶಬರಿಮಲೆ ವಿಚಾರದಲ್ಲಿ ಧಾರ್ಮಿಕ ನಂಬಿಕೆಗೆ ಬೆಲೆ ಕೊಡಬೇಕು.

ಉಪಚುನಾವಣೆ ಫಲಿತಾಂಶ LIVE:ಬಳ್ಳಾರಿ-ಸೋನಿಯಾ ದಾಖಲೆ ಮುರಿದ ಉಗ್ರಪ್ಪ ಉಪಚುನಾವಣೆ ಫಲಿತಾಂಶ LIVE:ಬಳ್ಳಾರಿ-ಸೋನಿಯಾ ದಾಖಲೆ ಮುರಿದ ಉಗ್ರಪ್ಪ

ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ ನಂತರವೂ ಪಿಣರಾಯಿ ವಿಜಯನ್ ವರ್ತನೆ ಸರಿಯಾಗಿಲ್ಲ. ನಂಬಿಕೆಯ ಮೇಲೆ ಬಲಾತ್ಕಾರ, ದಬ್ಬಾಳಿಕೆ ಸಹಿಸಲು ಸಾಧ್ಯವಿಲ್ಲ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.

English summary
Speaking to media persons in Udupi MLC Kota Shrinivas Poojary slams Actor Prakash Raj. He said that Prakash Raj till not come out from Gouri Lankesh mentaliy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X