'ಪುಲ್ವಾಮಾ ದಾಳಿ ಬಗ್ಗೆ ಎಚ್ಡಿಕೆಗೆ ರೇವಣ್ಣನೇ ಭವಿಷ್ಯ ಹೇಳಿರಬೇಕು'
Recommended Video
ಉಡುಪಿ, ಏಪ್ರಿಲ್ 06: ಪುಲ್ವಾಮಾ ಉಗ್ರರ ದಾಳಿ ಘಟನೆ ಬಗ್ಗೆ ಮೊದಲೇ ಗೊತ್ತಿತ್ತೆಂಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ಉಗ್ರರ ದಾಳಿ ಘಟನೆ ಬಗ್ಗೆ ಅವರಣ್ಣ ರೇವಣ್ಣ ಭವಿಷ್ಯ ಏನಾದರೂ ಹೇಳಿದ್ದರಾ? ಎಂದು ಅವರು ವ್ಯಂಗ್ಯವಾಡಿದ್ದಾರೆ. ಎಡಗೈಯ್ಯಲ್ಲಿ ನಾಲ್ಕು , ಬಲಗೈಯ್ಯಲ್ಲಿ ನಾಲ್ಕು ನಿಂಬೆ ಹಣ್ಣು ಹಿಡ್ಕೊಂಡು ರೇವಣ್ಣ ಭವಿಷ್ಯ ಹೇಳಿರಬಹುದು ಎಂದು ಕಿಡಿಕಾರಿದ ಅವರು ಮುಖ್ಯಮಂತ್ರಿ ಜವಾಬ್ದಾರಿ ಮತ್ತು ಹೊಣೆಗಾರಿಕೆಯಿಂದ ವರ್ತಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುಲ್ವಾಮಾ ದಾಳಿ ಬಗ್ಗೆ 2 ವರ್ಷದ ಹಿಂದೆಯೇ ಎಚ್ಡಿಕೆಗೆ ಗೊತ್ತಿತ್ತು
ಪುಲ್ವಾಮ ಘಟನೆ ಬಗ್ಗೆ ಗೊತ್ತಿದ್ರೆ ಎರಡು ವರ್ಷದ ಮೊದಲೇ ಹೇಳಬೇಕಿತ್ತು. ಚುನಾವಣೆ ಸಂದರ್ಭದಲ್ಲಿ ಹೇಳುವ ಅಗತ್ಯ ಏನಿತ್ತು? ಎಂದು ಅವರು ಪ್ರಶ್ನಿಸಿದರು.
ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ: ಕೋಟ ಶ್ರೀನಿವಾಸ್ ಪೂಜಾರಿ
ರಾಜ್ಯದಲ್ಲಿ ಮೈತ್ರಿಯೆಂಬ ತೇಪೆಯೊಳಗೆ ಎಲ್ಲಾ ಒಡೆದಿದೆ. ಮಂಡ್ಯ ಗೆಲ್ಲುವುದಿಲ್ಲ ಎಂಬೂದು ಸಿಎಂ ಗೆ ಗೊತ್ತಾಗಿದೆ. ತುಮಕೂರು, ಹಾಸನ ಕಷ್ಟವಿದೆ ಅಂತ ಸಿಎಂ ಗೆ ಅರಿವಾಗಿದೆ ಎಂದು ಅವರು ಹೇಳಿದರು. ಜೆಡಿಎಸ್ ನ ಕೌಟುಂಬಿಕ ರಾಜಕಾರಣದ ಕೊನೆಯ ದಿನಗಳು ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟರು.