ಕೊನೆ ಕ್ಷಣದ ಒಂದು ಲಕ್ಷದ ಆಫರ್ ಇಂಡಿಯಾ ಒಕ್ಕೂಟಕ್ಕೆ ನೆರವಾಯ್ತು: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ಜೂನ್ 04: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧೀಕೃತ ಘೋಷಣೆಯೊಂದೇ ಬಾಕಿ ಇದೆ. ತಮ್ಮ ಅಮೋಘ ಗೆಲುವಿನ ಬಗ್ಗೆ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು. ದುಡಿದ ಕಾರ್ಯಕರ್ತರಿಗೆ ಧನ್ಯವಾದಗಳು. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬ ಹಂಬಲದಿಂದ ಜನರು ನನಗೆ ಮತ ಹಾಕಿದ್ದಾರೆ. ಎನ್ಡಿಎ ಸ್ಪಷ್ಟ ಬಹುಮತ ಪಡೆಯುವ ನಿರೀಕ್ಷೆ ನಮಗೆ ಇತ್ತು. ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಇತ್ತು. ಎನ್ಡಿಎ 295ರ ಆಸು ಪಾಸು ಗೆಲುವು ಪಡೆದಿದೆ. ನಿಶ್ಚಯವಾಗಿ ಎನ್ಡಿಎ ಅಧಿಕಾರಕ್ಕೆ ಬರುತ್ತದೆ ಎಂದಿದ್ದಾರೆ.

ನಿರೀಕ್ಷೆ ಮಟ್ಟಕ್ಕೆ ಮುಟ್ಟಿಲ್ಲ ನಿಜ. ಉತ್ತರ ಪ್ರದೇಶ ಪಶ್ಚಿಮ ಬಂಗಾಳ ರಾಜಸ್ಥಾನದಲ್ಲಿ ನಾವು ಊಹೆ ಮಾಡಿದ ಪ್ರಮಾಣದಲ್ಲಿ ಗೆಲುವು ಪಡೆದಿಲ್ಲ. ಕೊನೆಯ ಹಂತದಲ್ಲಿ ಇಂಡಿಯಾ ಒಕ್ಕೂಟದವರು ಒಂದು ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದರು. ಮನೆ ಮನೆಗೆ ಮಾಡಿದ ಪ್ರಚಾರ ಸಾಮಾನ್ಯ ಜನರಲ್ಲಿ ಬದಲಾವಣೆಗೆ ಕಾರಣವಾಗಿರಬಹುದು. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಎನ್ಡಿಎ ಮತ್ತೊಮ್ಮೆ ಗೆದ್ದಿದೆ ಎಂದರು.
ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲುವ ಭರವಸೆ ಇತ್ತು. ಸ್ವಲ್ಪ ಕಡಿಮೆ ಇದ್ದೇವೆ. ತುಂಬಾ ಕಡಿಮೆ ಏನೂ ಬಂದಿಲ್ಲ. ಭಾರತಕ್ಕೆ ನರೇಂದ್ರ ಮೋದಿ ತುಂಬಾ ಕೆಲಸ ಮಾಡಿದ್ದಾರೆ. ಬಡವರ ಕಲ್ಯಾಣ ಯೋಜನೆಗಳು ಕೈ ಹಿಡಿದಿವೆ. 370 ರದ್ದು ಮಾಡಿದ್ದು ಅಯೋಧ್ಯೆಯಲ್ಲಿ ರಾಮಮಂದಿರ ಮಾಡಿದ್ದು, ಎಲ್ಲಾ ಘಟನೆಗಳು ಕಣ್ಣಮುಂದೆ ಇದ್ದರೂ, ಜನ ಒಂದು ಲಕ್ಷ ರೂಪಾಯಿ ನೀಡುವ ಇಂಡಿಯಾ ಒಕ್ಕೂಟ ಘೋಷಣೆಗೆ ಗಮನ ಸೆಳೆದಿದ್ದಾರೆ. ಇಂಡಿಯಾ ಒಕ್ಕೂಟದ ಈ ತಂತ್ರ ಕೆಲಸ ಮಾಡಿದ್ದು ಸತ್ಯ. ಬಹಳ ಬೇಗ ಹಿಂದಿ ಇಂಗ್ಲಿಷ್ ಕಲಿಯುತ್ತೇನೆ ವಿಶ್ವಾಸ ಇದೆ ಎಂದಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications