ಬಿಜೆಪಿಗಿದು ಆತ್ಮಾವಲೋಕನ ಮಾಡಿಕೊಳ್ಳಲಿಕ್ಕೆ ಸಕಾಲ:ಶ್ರೀನಿವಾಸ ಪೂಜಾರಿ
ಉಡುಪಿ, ನವೆಂಬರ್.06: ಶಿವಮೊಗ್ಗ, ಬಳ್ಳಾರಿ, ಜಮಖಂಡಿ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ಮೀರಿ ಕಾಂಗ್ರೆಸ್- ಜೆಡಿಎಸ್ ಗೆಲುವು ಸಾಧಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಳ್ಳಾರಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಹಣ ಹೊಳೆ ಹರಿಸಿದ್ದಾರೆ. ಹಣದ ದಂಧೆಯನ್ನು ತಡೆಯದಿದ್ದರೆ ಏರುಪೇರಾಗುತ್ತೆ ಅನ್ನೋ ಆತಂಕ ಇತ್ತು. ಆಳುವ ಪಕ್ಷ ತನ್ನೆಲ್ಲಾ ಅಧಿಕಾರ ದುರುಪಯೋಗ ಮಾಡಿಕೊಂಡಿದೆ.

ಶಿವಮೊಗ್ಗದ ಗೆಲುವು ಸಂತೋಷ ನೀಡಿದೆ. ನಮ್ಮ ಪಕ್ಷಕ್ಕೆ ಆತ್ಮಾವಲೋಕನ ಮಾಡಲು ಸಕಾಲ. ತಳಮಟ್ಟದಿಂದಲೇ ಪಕ್ಷವನ್ನು ಗಟ್ಟಿಗೊಳಿಸಬೇಕಾಗಿದೆ ಬಿಜೆಪಿ ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications