ಅಮೆರಿಕಾ ತಲುಪಿದ ಶ್ರೀಕೃಷ್ಣ, ಪ್ರತಿಷ್ಠಾಪನೆಗೆ ಕ್ಷಣಗಣನೆ
ನೂಜೆರ್ಸಿಯ ಎಡಿಸನ್ ನಲ್ಲಿ ಶ್ರೀ ಕೃಷ್ಣ ವೃಂದಾವನ ಸ್ಥಾಪನೆಯಾಗುತ್ತಿದ್ದು ಸಾಲಿಗ್ರಾಮ ಶಿಲೆಯಿಂದ ನಿರ್ಮಿಸಲಾದ ಶ್ರೀಕೃಷ್ಣ ಪ್ರತಿಮೆಯನ್ನು ಅಮೆರಿಕಾಗೆ ರವಾನಿಸಲಾದೆ.
ಉಡುಪಿ, ಮೇ 7: ಅಮೆರಿಕಾದಲ್ಲಿ ಸ್ಥಾಪಿಸಲಾಗುತ್ತಿರುವ ಪುತ್ತಿಗೆ ಶಾಖಾ ಮಠಕ್ಕೆ ರವಾನೆಯಾಗಿದ್ದ ಶ್ರೀ ಕೃಷ್ಣನ ಪ್ರತಿಮೆ ತಲುಪಿದೆ. ನ್ಯೂಜೆರ್ಸಿಯ ಎಡಿಸನ್ನಲ್ಲಿ ಈ ಶಾಖಾ ಮಠವನ್ನು ಸ್ಥಾಪಿಸಲಾಗುತ್ತಿದೆ.
ನೂಜೆರ್ಸಿಯ ಎಡಿಸನ್ ನಲ್ಲಿ ಶ್ರೀ ಕೃಷ್ಣ ವೃಂದಾವನ ಸ್ಥಾಪನೆಯಾಗುತ್ತಿದ್ದು ಸಾಲಿಗ್ರಾಮ ಶಿಲೆಯಿಂದ ನಿರ್ಮಿಸಲಾದ ಶ್ರೀಕೃಷ್ಣ ಪ್ರತಿಮೆಯನ್ನು ಅಮೆರಿಕಾಗೆ ರವಾನಿಸಲಾಗಿದೆ. ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿಶ್ರೀಕೃಷ್ಣ ಪ್ರತಿಮೆ ಅಮೆರಿಕಾ ತಲುಪಿದೆ.[ಅಮೆರಿಕಾದ ಎಡಿಸನ್ ನಲ್ಲಿ ಕೃಷ್ಣಾವತಾರ]

ಮೇ 8ರಂದು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ಉಪಸ್ಥಿತಿಯಲ್ಲಿ ನ್ಯೂಜೆರ್ಸಿಯ ಶ್ರೀಕೃಷ್ಣ ವೃಂದಾವನದಲ್ಲಿ ಸಾಲಿಗ್ರಾಮ ಶಿಲೆಯ ಶ್ರೀಕೃಷ್ಣ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ
ಅಮೆರಿಕಾದಲ್ಲಿ ತಲೆ ಎತ್ತಲಿರುವ ಈ ಪ್ರಥಮ ಕೃಷ್ಣ ಮಂದಿರದ ನಿರ್ಮಾಣ ಕಾರ್ಯಕ್ಕಾಗಿ ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿ ಸುಮಾರು 35 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ 4.50 ಎಕರೆ ವಿಸ್ತೀರ್ಣವುಳ್ಳ ಅರಮನೆಯಂತಹ ಬೃಹತ್ ಚರ್ಚ್ ವೊಂದನ್ನು ಖರೀದಿಸಲಾಗಿತ್ತು. ಅಲ್ಲಿ ಈ ಸಾಲಿಗ್ರಾಮದಿಂದ ಕೆತ್ತನೆ ಮಾಡಿದ ಕಡೆಗೋಲು ಕೃಷ್ಣನ ಪ್ರತಿಷ್ಠಾಪನೆ ನಡೆಯಲಿದೆ.
ಶ್ರೀಕೃಷ್ಣ ವಿಗ್ರಹದ ವೈಶಿಷ್ಟ್ಯ
ಸುಮಾರು ಮೂರೂವರೆ ಅಡಿ ಎತ್ತರದ ಕುಡುಗೋಲುಧಾರಿ ಶ್ರೀಕೃಷ್ಣನ ವಿಗ್ರಹವನ್ನು ನೇಪಾಳದ ಗಂಡಕಿ ನದಿಯ ಗೋಶಾಲೆ ಬಳಿಯೊಂದರಲ್ಲಿ ದೊರಕಿದ ಸಾಲಿಗ್ರಾಮ ಶಿಲೆಯಿಂದ ಕೆತ್ತನೆ ಮಾಡಲಾಗಿದೆ. ಕರಾವಳಿಯ ಶಿಲ್ಪಿಗಳು ಆರು ತಿಂಗಳ ಕಾಲ ಶ್ರಮಪಟ್ಟು ಮೂರ್ತಿ ನಿರ್ಮಾಣದ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications