ಬೆಳ್ಳಂಬೆಳಿಗ್ಗೆ ಕೃಷ್ಣ ಮಠದ ಆನೆ ಸುಭದ್ರೆ ರವಾನೆ; ಕಾರಣಗಳ ಸುತ್ತ!
ಉಡುಪಿ, ಸೆಪ್ಟೆಂಬರ್ 30: ಕೃಷ್ಣಮಠದ ಆನೆ ಸುಭದ್ರೆಯನ್ನು ಇವತ್ತು ಮುಂಜಾನೆ ಏಕಾಏಕಿ ಹೊನ್ನಾಳಿಗೆ ರವಾನೆ ಮಾಡಲಾಗಿದ್ದು ಭಕ್ತರ ಕುತೂಹಲಕ್ಕೆ ಕಾರಣವಾಗಿದೆ.
ಬೆಳಗ್ಗಿನ ಜಾವ 3.30ಕ್ಕೆ ಮಠದ ಸಿಬ್ಬಂದಿ ಸುಭದ್ರೆಯನ್ನು ಸಾಗಿಸಿದ ವಿಷಯ ಸಾಕಷ್ಟು ಗೊಂದಲಕ್ಕೂ ಕಾರಣವಾಗಿದೆ. ಸದ್ಯ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಮಠಕ್ಕೆ ಆನೆಯನ್ನು ರವಾನೆ ಮಾಡಲಾಗಿದೆ.
ಸಂತಾನಾಭಿವೃದ್ಧಿಯ ಉದ್ದೇಶದಿಂದ ಆನೆಯನ್ನು ರವಾನಿಸಿರುವುದಾಗಿ ಮಠದ ಸಿಬ್ಬಂದಿ ಹೇಳಿದ್ದರೂ ಇದರ ಹಿಂದಿರುವುದು ಅದೊಂದೇ ಕಾರಣ ಅಲ್ಲ. ಕಳೆದ ಇಪ್ಪತ್ತೈದು ವರ್ಷಗಳಿಂದಲೂ ಮಠದ ಪ್ರತಿ ಧಾರ್ಮಿಕ ಆಗುಹೋಗು, ರಥಬೀದಿಯ ಉತ್ಸವಗಳು ಮತ್ತು ಹಬ್ಬ ಹರಿದಿನಗಳಿಗೆ ಸುಭದ್ರೆ ಸಾಕ್ಷಿಯಾಗಿದ್ದಾಳೆ. ಮಠದ ಪ್ರತೀ ಧಾರ್ಮಿಕ ವಿಧಿಗಳಲ್ಲೂ ಸುಭದ್ರೆ ಸದಾ ಮುಂದೆ ಇರುತ್ತಿದ್ದಳು. ಹೀಗಾಗಿ ಕೃಷ್ಣಮಠದ ಭಕ್ತರಿಗೂ ಸುಭದ್ರೆಗೂ ಒಂದು ರೀತಿ ಅವಿನಾಭಾವ ಸಂಬಂಧ.

ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಸುಭದ್ರೆಗೆ ಸಕ್ರೆಬೈಲು ಕ್ಯಾಂಪ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಗುಣಮುಖವಾದ ಬಳಿಕ ಮತ್ತೆ ಕರೆತರಲಾಗಿತ್ತು. ಸಾಮಾನ್ಯವಾಗಿ ಕಾಡುಮೇಡು ಅಲೆದು ತಿನ್ನುವ ಆನೆಗಿಂತಲೂ ಈ ಸಾಕು ಆನೆಗಳಿಗೆ ಕಾಯಿಲೆ ಬೇಗ ಬರುತ್ತದೆ. ಮನುಷ್ಯರು ತಯಾರಿಸಿಕೊಡುವ ಆಹಾರವನ್ನು ಇವು ಅರಗಿಸಿಕೊಳ್ಳುವುದಿಲ್ಲ. ಜೊತೆಗೆ ಆನೆಯ ವಾಸ್ತವ್ಯ ಮತ್ತು ಅದರ ಆರೈಕೆಯೂ ಅಷ್ಟು ಸುಲಭದ ಕೆಲಸ ಅಲ್ಲ. ಹೀಗಾಗಿ ಕಳೆದ ಕೆಲವರ್ಷಗಳಿಂದ ಸುಭದ್ರೆ ಪದೇಪದೇ ಅನಾರೋಗ್ಯಕ್ಕೆ ಈಡಾಗುತ್ತಾ ಇದ್ದಳು. ಇದೀಗ ದಿಢೀರೆಂದು ಮುಂಜಾನೆ ಹೊತ್ತಿಗೆ ಸುಭದ್ರೆಯನ್ನು ದೂರ ಸಾಗಿಸಿದ ಬಗ್ಗೆ ಭಕ್ತರು ತಲೆಗೊಬ್ಬರಂತೆ ಮಾತಾಡಿಕೊಳ್ಳುತ್ತಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications