ಜಸ್ಟ್ ಪಾಸ್ ಮಾಡು ಸಾಕು- ದೇವರಿಗೆ ಪತ್ರ ಬರೆದ ವಿದ್ಯಾರ್ಥಿ
ಕುಂದಾಪುರ ಮಾರ್ಚ್ 26: ಪಾಸಾಗುವಷ್ಟು ಮಾತ್ರ ಅಂಕ ಕೊಡು ದೇವರೇ ಎಂದು ವಿದ್ಯಾರ್ಥಿಯೊಬ್ಬ ದೇವರಿಗೆ ಪತ್ರ ಬರೆದಿದ್ದಾನೆ. ದೇವರ ಕಾಣಿಕೆ ಹುಂಡಿಯಲ್ಲಿ ವಿಚಿತ್ರ ಪತ್ರ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಲ್ಲದೆ ಈ ಚೀಟಿಯಲ್ಲಿ ಯಾವ ವಿಷಯಕ್ಕೆ ಎಷ್ಟು ಅಂಕ ಬರಬೇಕು ಅನ್ನೋದನ್ನು ಕೂಡ ವಿದ್ಯಾರ್ಥಿ ಬರೆದಿದ್ದಾನೆ.
ಹೌದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಳಮಗ್ಗಿ ಹೊ ಬೊಬ್ಬರ್ಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಈ ಚೀಟಿ ಸಿಕ್ಕಿದೆ. ಈ ಚೀಟಿಯಲ್ಲಿ ವಿದ್ಯಾರ್ಥಿ ತನ್ನನ್ನು ಜಸ್ಟ್ ಪಾಸ್ ಮಾಡಿದರೆ ಸಾಕು ದೇವರೆ ಎಂದು ಬೇಡಿಕೊಂಡು ಬರೆದ ಚೀಟಿಯನ್ನು ಹುಂಡಿಗೆ ಹಾಕಿದ್ದಾನೆ.

ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಈ ಚೀಟಿ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿದ್ಯಾರ್ಥಿ ತನಗೆ ಎಷ್ಟು ಅಂಕ ಬೇಕು ಅನ್ನೋದನ್ನು ಕೂಡ ಚೀಟಿಯಲ್ಲಿ ಬರೆದಿದ್ದಾನೆ. ಗಣಿತದಲ್ಲಿ 39, 38, 37, 36 ಅಂಕ, ಇಂಗ್ಲೀಷ್ ವಿಷಯದಲ್ಲಿ 39,38,37 ಕನ್ನಡಕ್ಕೆ 40, 39 ವಿಜ್ಞಾನಕ್ಕೆ 39, 38 ಹಿಂದಿ ವಿಷಯಕ್ಕೆ 40, 39 ಹಾಗೂ ಸಮಾಜಶಾಸ್ತ್ರಕ್ಕೆ 38, 37 ಅಂಕ ನೀಡುವಂತೆ ವಿದ್ಯಾರ್ಥಿ ಚೀಟಿಯಲ್ಲಿ ಬರೆದು ಬೇಡಿಕೊಂಡಿದ್ದಾನೆ. ಜೊತೆಗೆ ಇದಕ್ಕಿಂತಲೂ ಹೆಚ್ಚು ಕಡಿಮೆ ಅಂಕ ನನಗೆ ಬೇಡ ಎಂದು ಕೂಡ ವಿದ್ಯಾರ್ಥಿ ಬರೆದಿದ್ದಾನೆ.
ದೇವರಿಗೆ ಆಯ್ಕೆ ಕೊಟ್ಟು ಕೋರಿಕೆ ಸಲ್ಲಿಸಿದ ವಿದ್ಯಾರ್ಥಿಯ ಚೀಟಿಯ ಈ ಫೋಟೋವನ್ನು Namma Kundapura ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ಹಂಚಿಕೊಂಡಾಗಿನಿಂದ 500 ಕ್ಕೂ ಹೆಚ್ಚು ಲೈಕ್ಸ್ ಮತ್ತು ಹಲವಾರು ಕಾಮೆಂಟ್ಸ್ಗಳು ಬಂದಿವೆ.
ಈ ಪೋಸ್ಟ್ಗೆ ಸಾಕಷ್ಟು ಕಾಮೆಂಟ್ಗಳು ಬಂದಿದ್ದು, 'ಈ ವಿದ್ಯಾರ್ಥಿಗೆ ಪೋಷಕರ ಭಯ ಹೆಚ್ಚಾಗಿರಬೇಕು. ಹೀಗಾಗಿ ಬಾಲಕ ಹೆದರಿಕೊಂಡಿದ್ದಾನೆ. ದೇವರಿಗೆ ಮನವಿ ಪತ್ರ ಸಲ್ಲಿಸಿದ್ದಾನೆ' ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. 'ದೇವರಿಗೆ ಬೇಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ. ಅದು ಅವರ ಕೋರಿಕೆ' ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ.
ಮತ್ತೊಬ್ಬರು ʼಪಾಪ ಆ ವಿದ್ಯಾರ್ಥಿಯನ್ನು ಪಾಸು ಮಾಡಪ್ಪಾ ದೇವರೇʼ ಎಂಬ ಕಾಮೆಂಟ್ ಮಾಡಿದ್ದಾರೆ. ಇದೇ ಕಾಮೆಂಟ್ ಬಾಕ್ಸ್ನಲ್ಲಿ ವಿದ್ಯಾರ್ಥಿಗಿರುವ ಆಸೆ ದುರಾಸೆ ಬಗ್ಗೆ ಕೂಡ ಚರ್ಚೆ ಆಗಿದೆ. ನೆಟ್ಟಿಗರೊಬ್ಬರು 'ವಿದ್ಯಾರ್ಥಿಗೆ ದುರಾಸೆ ಇಲ್ಲ. ಜಸ್ಟ್ ಪಾಸ್ ಮಾಡು ಎಂದು ಬರೆದಿದ್ದಾನೆ' ಎಂದು ಬರೆಯಲಾಗಿದೆ. ಇದಲ್ಲದೆ ಪೋಸ್ಟ್ಗೆ ಕಾಮಿಡಿ ಕಾಮೆಂಟ್ಗಳು ಬಂದಿವೆ.
ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಭಯ ಹೆಚ್ಚಾಗುತ್ತಿದೆ. ಮಕ್ಕಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಪೋಷಕರ ಪಾತ್ರ ತುಂಬಾ ದೊಡ್ಡದಾಗಿದೆ. ಪರೀಕ್ಷಾ ಆತಂಕ ಇರುವ ಮಕ್ಕಳನ್ನು ಗುರುತಿಸಿ ನೂರು ಅಂಕ ಪಡೆಯುವುದು ಮಾತ್ರ ಗೆಲುವಲ್ಲ ಎನ್ನುವುದನ್ನು ಮನವರಿಕೆ ಮಾಡುವುದು ಅತ್ಯಗತ್ಯ. ಅಣುಕು ಪರೀಕ್ಷೆಗಳನ್ನು ನಡೆಸಿ ಅವರಲ್ಲಿನ ಕಾರ್ಯಕ್ಷಮತೆಯನ್ನು ಗುರುತಿಸಿ ಧೈರ್ಯ ತುಂಬಬೇಕು. ದೀರ್ಘ ಉಸಿರಾಟದ ಕ್ರಮಗಳನ್ನು ಕಲಿಸಿಕೊಡಬೇಕು. ಫೇಲಾಗುವ ಆತಂಕವಿದ್ದರೆ ಪದ್ಯದ ಇಡೀ ಓದಿನ ಬದಲು ಆಯ್ದ ಭಾಗಗಳನ್ನು ಸರಿಯಾಗಿ ಓದಲು ತಿಳಿಸಬೇಕು. ಹೀಗೆ ಕೆಲ ಕ್ರಮಗಳ ಮೂಲಕ ಪೋಷಕರು ಮಕ್ಕಳಿಗಿರುವ ಪರೀಕ್ಷೆಯ ಭಯವನ್ನು ಕಡಿಮೆ ಮಾಡುವಲ್ಲಿ ಪಾಲ್ಗೊಳ್ಳುವುದು ಉತ್ತಮ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications