ಎಳ್ಳಮಾವಾಸ್ಯೆ ಅಚರಣೆ, ಅಗಲಿದ ಹಿರಿಯರ ಆತ್ಮಶಾಂತಿಗೆ ಪ್ರಾರ್ಥನೆ
ಉಡುಪಿ, ಡಿಸೆಂಬರ್ 29: ಆಗಷ್ಟೇ ಮೂಡಿಬಂದ ನೇಸರ, ಕಡಲ ತೀರದಲ್ಲಿ ಕಿಕ್ಕಿರಿದ ಜನಸಾಗರ, ಸೂರ್ಯ ದೇವನಿಗೆ ಭಕ್ತಿಯ ನಮಸ್ಕಾರ, ಚುಮು ಚುಮು ಚಳಿಯಲ್ಲೂ ಪವಿತ್ರ ಸ್ನಾನ. ಗುರುವಾರ ಎಳ್ಳಮಾವಾಸ್ಯೆ , ಹೀಗಾಗಿ ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಸಾವಿರಾರು ಜನ ಸೇರಿದ್ದರು. ಅಗಲಿದ ಹಿರಿಯರಿಗೆ ಮೋಕ್ಷ ಪ್ರಾಪ್ತಿಯಾಗಲಿ ಎಂದು ಪಿಂಡ ಪ್ರದಾನ ಮಾಡಿದರು.
ಸಮುದ್ರ ತೀರದಲ್ಲಿ ಜಾತಿ ಭೇದವಿಲದೆ ಸಾವಿರಾರು ಜನರು ಸೇರಿದ್ದರು. ಮನೆಯಲ್ಲಿ ಯಾರಾದ್ರೂ ಸಾವನ್ನಪ್ಪಿದಾಗ ಅವರಿಗೆ ಪಿಂಡ ಸಮರ್ಪಣೆ ಮಾಡದಿದ್ದ ಪಕ್ಷದಿದ್ದಲ್ಲಿ ಎಳ್ಳಮಾವಾಸ್ಯೆಯಂದು ಪಿಂಡ ಸಮರ್ಪಣೆ ಮಾಡಿದರೆ ಮೋಕ್ಷ ಪ್ರಾಪ್ತಿ ಆಗುತ್ತದೆ ಎಂಬುದು ಜನರ ನಂಬಿಕೆ. ಇನ್ನು ಸಮುದ್ರ ಸ್ನಾನ ಮಾಡಿದರೆ ಚರ್ಮ ರೋಗ ಗುಣವಾಗುತ್ತದೆ ಎಂಬುದು ಕೂಡ ನಂಬಿಕೆ.[ಮೂಢನಂಬಿಕೆ ನಿಷೇಧಿಸುವ ಧೈರ್ಯ ಸಿಎಂಗಿಲ್ಲ: ಪೇಜಾವರ ಶ್ರೀ]

ಎಳ್ಳಮಾವಾಸ್ಯೆ ಪ್ರಯುಕ್ತ ಗುರುವಾರ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕಡಲ ತೀರದಲ್ಲಿ ಆಸ್ತಿಕರು ಸಾವಿರಾರು ಸಂಖ್ಯೆಯಲ್ಲಿ ತೀರ್ಥ ಸ್ನಾನ ಮಾಡಿ, ಹೋಮ ಹವನದಲ್ಲಿ ಪಾಲ್ಗೊಂಡರು. ಉಡುಪಿಯ ಮಲ್ಪೆ ಕಡಲತೀರದಲ್ಲಿ ಬೆಳ್ಳಂ ಬೆಳಗ್ಗೆ ಚುಮು ಚುಮು ಚಳಿಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಸಮುದ್ರಕ್ಕೆ ಇಳಿದು ಸ್ನಾನ ಮಾಡಿದ್ದರು.[ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಪರಿಕ್ಕರ್]

ಆ ಬಳಿಕ ಅಗಲಿದ ಹಿರಿಯರಿಗೆ ಪಿಂಡ ಪ್ರದಾನ ಮಾಡುವ ಮೂಲಕ ಹಿರಿಯರ ಆತ್ಮ ಶಾಂತಿಗಾಗಿ ಪ್ರಾರ್ಥಿಸಿದರು. ರೈತರು ಭೂದೇವಿಗೆ ನಮಿಸುತ್ತಾ ಕಡಲ ತೀರದ ಬಳಿಯ ಒಡಬಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಮಲ್ಪೆ ಸಮುದ್ರ ತೀರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications