ಉಡುಪಿ ಮಠದಲ್ಲಿ ತಪ್ತ ಮುದ್ರಾಧಾರಣೆ; ನೂರಾರು ಭಕ್ತರ ಆಗಮನ
ಉಡುಪಿ, ಜುಲೈ 20; ಮಾಧ್ವ ಸಂಪ್ರದಾಯದಲ್ಲಿ ತಪ್ತ ಮುದ್ರಾಧಾರಣೆ ವಿಶೇಷ ಮಹತ್ವ ಪಡೆದಿದೆ. ಮಠಾಧೀಶರ ಮೂಲಕ ತಪ್ತ ಮುದ್ರೆ ಹಾಕಿಸಿಕೊಂಡರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎನ್ನುವುದು ಭಕ್ತರ ನಂಬಿಕೆ.
ಮಾದ್ವ ಮತದ ಮೂಲಕೇಂದ್ರವಾಗಿರುವ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನೂರಾರು ಭಕ್ತರು ಮುದ್ರಾಧಾರಣೆ ಮಾಡಿಸಿಕೊಂಡರು. ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಈಶಪ್ರಿಯ ತೀರ್ಥರಿಂದ ಭಕ್ತರು ಮುದ್ರೆ ಧಾರಣೆ ಮಾಡಿಸಿಕೊಂಡರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ ಎನ್ನುವ ವಿಶೇಷ ಸಂಪ್ರದಾಯವಿದೆ. ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರೆ ರೋಗ ರುಜಿನಗಳು ದೂರವಾಗಿ, ಕೃಷ್ಣನ ಅನುಗ್ರಹ ಪ್ರಾಪ್ತಿ ಆಗುತ್ತದೆ ಎನ್ನುವುದು ಗೋಪಾಲನ ಭಕ್ತರ ನಂಬಿಕೆಯಾಗಿದೆ.

ಸರ್ವಜ್ಞ ಪೀಠಾರೂಢ ಯತಿಗಳಲ್ಲಿ ಆಚಾರ್ಯ ಮಧ್ವರು ಸನ್ನಿಹಿತರಾಗಿರುತ್ತಾರೆ ಎಂಬ ನಂಬಿಕೆ ಕೂಡಾ ಇದೆ. ಕೇವಲ ಯತಿಗಳಿಂದ ಮಾತ್ರ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕೆಂಬ ಪದ್ಧತಿ ಕೂಡ ಇದೆ. ವಿಷ್ಣುವಿನ ಆಯುಧಗಳಾದ ಶಂಖ ಮತ್ತು ಚಕ್ರದ ಚಿಹ್ನೆಗಳನ್ನು ಬಿಸಿಯಿಂದ ಕಾದ ಲೋಹದ ಮೂಲಕ ಮೈಮೇಲೆ ಧರಿಸುವ ಸಂಪ್ರದಾಯ ಇದೆ.
ಬ್ರಹ್ಮಾದಿ ದೇವತೆಗಳು ಕೂಡಾ ಮುದ್ರಾಧಾರಣೆ ಮಾಡಿಕೊಳ್ಳುತ್ತಾರೆ. ಶ್ರೀ ಮಧ್ವಚಾರ್ಯರು ಈ ದಿನವೇ ಸ್ವರ್ಗದಲ್ಲಿ ಎಲ್ಲಾ ದೇವತೆಗಳಿಗೆ ಮುದ್ರಾಧಾರಣೆ ಮಾಡಿಸುತ್ತಾರೆ ಎಂಬ ಕಥೆಯಿದೆ. ಪುರುಷರು ಪಂಚಮುದ್ರೆಯನ್ನು ಇರಿಸಿಕೊಂಡರೆ, ಮಹಿಳೆಯರು ಎಡತೋಳಿಗೆ ಶಂಖ ಮತ್ತು ಬಲತೋಳಿಗೆ ಚಕ್ರಮುದ್ರೆ ಇರಿಸಿಕೊಳ್ಳುತ್ತಾರೆ.

ರೋಧಿಸುತ್ತಲೇ ಮುದ್ರೆ ಇರಿಸಿಕೊಳ್ಳುವ ಮಕ್ಕಳು ಮತ್ತು ವೃದ್ಯಾಪ್ಯದಲ್ಲೂ ಬಿಸಿಲೋಹವನ್ನು ಮೈಮೇಲೆ ಇರಿಸಿಕೊಳ್ಳುವ ಇಳಿವಯಸ್ಸಿನವರ ಹುಮ್ಮಸ್ಸು ಮುದ್ರಾಧಾರಣೆಯ ವಿಶೇಷ. ಸುದರ್ಶನ ಹೋಮಕುಂಡದಲ್ಲಿ ಶಂಖ, ಚಕ್ರದ ಲೋಹದ ಅಚ್ಚು ಇರಿಸಿ ಮುದ್ರಾಧಾರಣೆ ಮಾಡುವುದರಿಂದ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.
ಉಡುಪಿಯ ಅಷ್ಟಮಠಾಧೀಶರು ಕೂಡಾ ವಿವಿಧೆಡೆ ತೆರಳಿ ಈ ದಿನ ಭಕ್ತರಿಗೆ ಮುದ್ರಾಧಾರಣೆ ಮಾಡುತ್ತಾರೆ. ಮುದ್ರೆಧಾರಣೆಯಿಂದ ಸರ್ವ ರೋಗ ರುಜಿನಗಳು ನಿವಾರಣೆಯಾಗಿ ಲೋಕ ಕಲ್ಯಾಣ ಆಗುತ್ತೆ ಎನ್ನುವ ನಂಬಿಕೆ ಭಕ್ತರದ್ದು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications