ಉಡುಪಿ ಮಠದಲ್ಲಿ ತಪ್ತ ಮುದ್ರಾಧಾರಣೆ; ನೂರಾರು ಭಕ್ತರ ಆಗಮನ
ಉಡುಪಿ, ಜುಲೈ 20; ಮಾಧ್ವ ಸಂಪ್ರದಾಯದಲ್ಲಿ ತಪ್ತ ಮುದ್ರಾಧಾರಣೆ ವಿಶೇಷ ಮಹತ್ವ ಪಡೆದಿದೆ. ಮಠಾಧೀಶರ ಮೂಲಕ ತಪ್ತ ಮುದ್ರೆ ಹಾಕಿಸಿಕೊಂಡರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎನ್ನುವುದು ಭಕ್ತರ ನಂಬಿಕೆ.
ಮಾದ್ವ ಮತದ ಮೂಲಕೇಂದ್ರವಾಗಿರುವ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನೂರಾರು ಭಕ್ತರು ಮುದ್ರಾಧಾರಣೆ ಮಾಡಿಸಿಕೊಂಡರು. ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಈಶಪ್ರಿಯ ತೀರ್ಥರಿಂದ ಭಕ್ತರು ಮುದ್ರೆ ಧಾರಣೆ ಮಾಡಿಸಿಕೊಂಡರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ ಎನ್ನುವ ವಿಶೇಷ ಸಂಪ್ರದಾಯವಿದೆ. ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರೆ ರೋಗ ರುಜಿನಗಳು ದೂರವಾಗಿ, ಕೃಷ್ಣನ ಅನುಗ್ರಹ ಪ್ರಾಪ್ತಿ ಆಗುತ್ತದೆ ಎನ್ನುವುದು ಗೋಪಾಲನ ಭಕ್ತರ ನಂಬಿಕೆಯಾಗಿದೆ.

ಸರ್ವಜ್ಞ ಪೀಠಾರೂಢ ಯತಿಗಳಲ್ಲಿ ಆಚಾರ್ಯ ಮಧ್ವರು ಸನ್ನಿಹಿತರಾಗಿರುತ್ತಾರೆ ಎಂಬ ನಂಬಿಕೆ ಕೂಡಾ ಇದೆ. ಕೇವಲ ಯತಿಗಳಿಂದ ಮಾತ್ರ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕೆಂಬ ಪದ್ಧತಿ ಕೂಡ ಇದೆ. ವಿಷ್ಣುವಿನ ಆಯುಧಗಳಾದ ಶಂಖ ಮತ್ತು ಚಕ್ರದ ಚಿಹ್ನೆಗಳನ್ನು ಬಿಸಿಯಿಂದ ಕಾದ ಲೋಹದ ಮೂಲಕ ಮೈಮೇಲೆ ಧರಿಸುವ ಸಂಪ್ರದಾಯ ಇದೆ.
ಬ್ರಹ್ಮಾದಿ ದೇವತೆಗಳು ಕೂಡಾ ಮುದ್ರಾಧಾರಣೆ ಮಾಡಿಕೊಳ್ಳುತ್ತಾರೆ. ಶ್ರೀ ಮಧ್ವಚಾರ್ಯರು ಈ ದಿನವೇ ಸ್ವರ್ಗದಲ್ಲಿ ಎಲ್ಲಾ ದೇವತೆಗಳಿಗೆ ಮುದ್ರಾಧಾರಣೆ ಮಾಡಿಸುತ್ತಾರೆ ಎಂಬ ಕಥೆಯಿದೆ. ಪುರುಷರು ಪಂಚಮುದ್ರೆಯನ್ನು ಇರಿಸಿಕೊಂಡರೆ, ಮಹಿಳೆಯರು ಎಡತೋಳಿಗೆ ಶಂಖ ಮತ್ತು ಬಲತೋಳಿಗೆ ಚಕ್ರಮುದ್ರೆ ಇರಿಸಿಕೊಳ್ಳುತ್ತಾರೆ.

ರೋಧಿಸುತ್ತಲೇ ಮುದ್ರೆ ಇರಿಸಿಕೊಳ್ಳುವ ಮಕ್ಕಳು ಮತ್ತು ವೃದ್ಯಾಪ್ಯದಲ್ಲೂ ಬಿಸಿಲೋಹವನ್ನು ಮೈಮೇಲೆ ಇರಿಸಿಕೊಳ್ಳುವ ಇಳಿವಯಸ್ಸಿನವರ ಹುಮ್ಮಸ್ಸು ಮುದ್ರಾಧಾರಣೆಯ ವಿಶೇಷ. ಸುದರ್ಶನ ಹೋಮಕುಂಡದಲ್ಲಿ ಶಂಖ, ಚಕ್ರದ ಲೋಹದ ಅಚ್ಚು ಇರಿಸಿ ಮುದ್ರಾಧಾರಣೆ ಮಾಡುವುದರಿಂದ ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.
ಉಡುಪಿಯ ಅಷ್ಟಮಠಾಧೀಶರು ಕೂಡಾ ವಿವಿಧೆಡೆ ತೆರಳಿ ಈ ದಿನ ಭಕ್ತರಿಗೆ ಮುದ್ರಾಧಾರಣೆ ಮಾಡುತ್ತಾರೆ. ಮುದ್ರೆಧಾರಣೆಯಿಂದ ಸರ್ವ ರೋಗ ರುಜಿನಗಳು ನಿವಾರಣೆಯಾಗಿ ಲೋಕ ಕಲ್ಯಾಣ ಆಗುತ್ತೆ ಎನ್ನುವ ನಂಬಿಕೆ ಭಕ್ತರದ್ದು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications