ಜಪ್ತಿ ಬಳಿ ಮಹಿಳೆಯ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಉಡುಪಿ, ಮಾರ್ಚ್ 05:ಮಹಿಳೆಯೊಬ್ಬರು ಹಾಲನ್ನು ಡೇರಿಗೆ ಕೊಡಲು ತೆರಳುತ್ತಿದ್ದ ವೇಳೆ ಚಿರತೆಯೊಂದು ದಾಳಿ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಸಾಕುನಾಯಿಗಳನ್ನು ಕೊಂದು ಜನರಲ್ಲಿ ಭಯ ಹುಟ್ಟಿಸಿದ ಚಿರತೆ ಸಾವು!
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಜಪ್ತಿ ಎಂಬಲ್ಲಿ ಈ ಘಟನೆ ನಡೆದಿದೆ.ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಮನೆಯಿಂದ ಹಾಲು ತೆಗೆದುಕೊಂಡು ಹೋಗುತ್ತಿದ್ದಾಗ ಸಮೀಪದ ಹಾಡಿಯಿಂದ ಹಾರಿದ ಚಿರತೆ ಮಹಿಳೆ ಮೇಲೆ ದಾಳಿ ನಡೆಸಿದೆ.
ಸಾಸಿವೆಹಳ್ಳದ ಬಳಿ ಕೊನೆಗೂ ಬೋನಿಗೆ ಬಿದ್ದ ಹೆಣ್ಣು ಚಿರತೆ, ನಿಟ್ಟುಸಿರುಬಿಟ್ಟ ಜನ
ಚಿರತೆ ದಾಳಿಗೆ ಒಳಗಾದ ಮಹಿಳೆಯ ಮುಖ, ಹಣೆ, ಕುತ್ತಿಗೆ ಹಾಗೂ ಕಿವಿ, ಕೈ ಭಾಗಕ್ಕೆ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಗಾಯಗೊಂಡ ಮಹಿಳೆಗೆ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕುಂದಾಪುರದ ಜಪ್ತಿ ಭಾಗದಲ್ಲಿ ಚಿರತೆ ಓಡಾಟ ಇದೇ ಮೊದಲು ಎನ್ನಲಾಗಿದೆ. ಈಗ ಏಕಾಏಕಿ ಚಿರತೆ ಕಾಣಿಸಿಕೊಂಡಿರುವುದು ಅಲ್ಲದೆ, ದಾಳಿ ಮಾಡಿ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಚಿರತೆ ದಾಳಿ ಮಾಡಿದ ಪ್ರದೇಶಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.