Get Updates
Get notified of breaking news, exclusive insights, and must-see stories!

ಮಣಿಪಾಲದ ಗ್ರಾಮದಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಸೆರೆ

ಉಡುಪಿ, ಸೆಪ್ಟೆಂಬರ್ 05: ಮಣಿಪಾಲದ ಸರಳೆಬೆಟ್ಟು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆಯೊಂದು ಮಣಿಪಾಲದಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳೆಬೆಟ್ಟು ವಿಜಯನಗರ ಕೋಡಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಇಂದು ನಸುಕಿನ ವೇಳೆಗೆ ಚಿರತೆ ಬಿದ್ದಿದೆ.

Recommended Video

      ದಾರಿ ತೋರಿದ ಗುರುವಿಗೆ ನಮನ | Happy teachers day | Oneindia Kannada

      ಕಳೆದ ಕೆಲವು ದಿನಗಳಿಂದ ವಿಜಯನಗರ ಕೋಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಈ ಚಿರತೆಯು ಜನರಲ್ಲಿ ಭೀತಿ ಹುಟ್ಟಿಸಿತ್ತು. ಅಲ್ಲದೇ ಸುತ್ತಮುತ್ತಲಿನ ಮನೆಯಲ್ಲಿದ್ದ ಕರು, ನಾಯಿ, ಕೋಳಿಗಳನ್ನು ಹಿಡಿದು ತಿನ್ನುತ್ತಿತ್ತು. ಚಿರತೆಯ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿತ್ತು.

      Udupi: Leopard Captured In Saralebettu Village Of Manipal

      ಕೊನೆಗೆ ಈ ಭಾಗದ ಜನರು ಅರಣ್ಯ ಇಲಾಖೆಯ ಮೊರೆ ಹೋಗಿದ್ದರು. ಅಧಿಕಾರಿಗಳು ಚಿರತೆಯನ್ನು ಕೆಡವಲು ಬೋನು ಇರಿಸಿದ್ದರು. ಇಂದು ಬೆಳಿಗ್ಗೆ ಭಾರೀ ಗಾತ್ರದ ಚಿರತೆ ಸೆರೆಯಾಗುವುದರೊಂದಿಗೆ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. ಚಿರತೆಯನ್ನು ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+