ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚಿನಿಂದ ಕೂಡಿದ ಜಡಿಮಳೆ
ಉಡುಪಿ, ಜನವರಿ 7: ಉಡುಪಿ ಜಿಲ್ಲೆಯಾದ್ಯಂತ ಬುಧವಾರ ಕತ್ತಲಾವರಿಸುತ್ತಿದ್ದಂತೆ ಒಂದೇ ಸಮನೇ ಮಳೆ ಸುರಿಯಿತು. ಸಂಜೆ 6.30ರಿಂದ ಪ್ರಾರಂಭಗೊಂಡ ಮಳೆ, ರಾತ್ರಿ ತನಕ ಮುಂದುವರೆಯಿತು. ಗುಡುಗು, ಮಿಂಚು ಸಹಿತ ಬಂದ ದಿಢೀರ್ ಮಳೆಗೆ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿತು.
ಸಂಜೆ ವೇಳೆ ಜನರು ತಮ್ಮ ಕಚೇರಿಗಳಿಂದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಂತೆ, ದಿಢೀರೆಂದು ಮಳೆ ಸುರಿಯತೊಡಗಿತು. ಉಡುಪಿ, ಕುಂದಾಪುರ, ಬ್ರಹ್ಮಾವರ ಸಹಿತ ಹಲವೆಡೆ ಜಡಿಮಳೆ ಸುರಿಯುತ್ತಿದೆ.
ಅಕಾಲಿಕ ಮಳೆಗೆ ವಾಹನ ಸವಾರರು, ಪಾದಚಾರಿಗಳು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಸಾಕಷ್ಟು ಪರದಾಡಿದರು. ನಗರದ ತಗ್ಗು ಪ್ರದೇಶಗಳಲ್ಲಿ ಮಳೆಗಾಲವನ್ನು ನೆನಪಿಸುವಂತೆ ನೀರು ನಿಂತಿದೆ. ಉಡುಪಿಯ ಪ್ರಮುಖ ರಸ್ತೆಗಳಲ್ಲಿ ಸಂಜೆಯ ಬಳಿಕ ಮಳೆ ನೀರಿನಿಂದಾಗಿ ವಾಹನ ಸಂಚಾರ ಕೂಡ ಅಸ್ತವ್ಯಸ್ತಗೊಂಡಿತು.

ಅಕಾಲಿಕ ಮಳೆಯಿಂದಾಗಿ ಕರಾವಳಿಯ ಮುಖ್ಯ ಬೆಳೆ ಭತ್ತದ ಬೆಳೆಗೆ ಸಾಕಷ್ಟು ನಷ್ಟವುಂಟಾಗುವ ಸಾಧ್ಯತೆ ಇದೆ. ಗುಡುಗು ಮಿಂಚಿನಿಂದ ಕೂಡಿದ ಮಳೆ ಈಗಲೂ ಮುಂದುವರಿದಿದ್ದು, ಗುರುವಾರವೂ ಸಹ ಮಳೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ, ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲ್ ಸಿಡಿಲು ಹೊಡೆತಕ್ಕೆ ಹೋಟೆಲ್ ಸಂಪೂರ್ಣ ಭಸ್ಮವಾಗಿದೆ.

ಸಪ್ತಮಿ ಹೋಟೆಲ್ ಬೆಂಕಿ ನಂದಿಸಲು ಅಗ್ನಿ ಶಾಮಕ ದಳ ಹರಸಾಹಸ ಪಟ್ಟಿದ್ದು, ಅಗ್ನಿ ಶಾಮಕದಳದ ಕಾರ್ಯಾಚರಣೆಯಿಂದ ಭಾರೀ ಅನಾಹತ ತಪ್ಪಿದಂತಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications