ಲಿಂಗಾಯತ ಧರ್ಮ: 'ಅಲ್ಪಸಂಖ್ಯಾತರಾಗುವುದು ಸುಲಭವಲ್ಲ' - ಪೇಜಾವರ ಶ್ರೀ
ಉಡುಪಿ, ಜುಲೈ 24: "ಬಸವಣ್ಣ ವೇದವನ್ನು ಒಪ್ಪಿದ್ದಾರೆ ಕೆಲವು ವಿಚಾರದಲ್ಲಿ ಟೀಕೆ ಮಾಡಿದ್ದಾರೆ ಆದರೆ ಬಸವಣ್ಣ ಶಿವನನ್ನು ಆರಾಧಿಸಲಿಲ್ಲವೇ? ಶಿವನ ಆರಾಧನೆ ಮಾಡಿದ ಮೇಲೆ ಅವರೂ ಹಿಂದೂಗಳೇ," ಎಂದು ಉಡುಪಿಯಲ್ಲಿ ಪೇಜಾವರಶ್ರೀ ಹೇಳಿಕೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, "ಮಠಾಧೀಶರಿಗೆ ವಿಘಟನೆ ಮಾಡುವ ಮನಸ್ಸಿಲ್ಲ. ಅಲ್ಪ ಸಂಖ್ಯಾತರಾಗುವ ಉದ್ದೇಶದಿಂದ ಲಿಂಗಾಯತರ ಹೋರಾಟ ನಡೆಯುತ್ತಿದೆ. ಆದರೆ ಅಲ್ಪಸಂಖ್ಯಾತರಾಗುವುದು ಸುಲಭದ ಮಾತಲ್ಲ," ಎಂದರು.

"ಸಮಾಜದಲ್ಲಿ ಜಾತಿ ವ್ಯವಸ್ಥೆ ಬೇಕು. ಆದರೆ ಎಲ್ಲರ ನಡುವೆ ಸಾಮರಸ್ಯ ಇರಬೇಕು. ಹಿಂದೂ ಧರ್ಮದ ವಿಭಜನೆ ಬೇಡ. ವೀರಶೈವ ಧರ್ಮದ ವಿಭಜನೆ ಸಲ್ಲದು. ಇದು ಸ್ವೀಕರಿಸಲು ಅರ್ಹ ವಿಚಾರವಲ್ಲ. ಪಂಚ ಪೀಠಾಧಿಪತಿಗಳಿಗೂ ವಿಭಜನೆ ಒಪ್ಪಿಗೆಯಿಲ್ಲ. ವಿರಕ್ತ ಮಠಾಧೀಶರಿಗೆ ಈ ಬೆಳವಣಿಗೆ ಸರಿ ಅನ್ನಿಸಿಲ್ಲ," ಎಂದರು.
"ನನ್ನ ಆಶಯದಲ್ಲಿ ರಾಜಕೀಯ ಉದ್ದೇಶ ಇಲ್ಲ. ಪಕ್ಷ, ರಾಜಕೀಯ ದೃಷ್ಟಿ ನನ್ನಲ್ಲಿ ಇಲ್ಲ. ಹಿಂದೂ ಸಮಾಜದ ಏಳಿಗೆಗೆ ಈ ಸಲಹೆ ಸೂಚನೆ ನೀಡುತ್ತಿದ್ದೇನೆ. ನಾನು ವೀರಶೈವ- ಲಿಂಗಾಯತ ಸಮಾಜದವ ಅಲ್ಲ. ನಾನು ಅವರ ಹಿತೈಷಿಯಾಗಿ ಈ ಸೂಚನೆ ನೀಡುತ್ತಿದ್ದೇನೆ," ಎಂದು ಹೇಳಿಕೆ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications