ಉಡುಪಿ ವಿದ್ಯಾರ್ಥಿ ಗಳ ಮುಡಿಗೆ 'ಗ್ರ್ಯಾಂಡ್' ಪ್ರಶಸ್ತಿ
ಉಡುಪಿ, ಜನವರಿ. 11 : ದಕ್ಷಿಣ ಭಾರತದ ಇಂಟೆಲ್ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಐ.ಆರ್ ಐ.ಎಸ್ ವಿಜ್ಞಾನ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಬ್ರಹ್ಮಾವರದ ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಪಿಯುಸಿ ವಿದ್ಯಾರ್ಥಿಗಳಾದ ಚೈತನ್ಯ ಮತ್ತು ಜೀವಿ ''ಗ್ರಾಂಡ್'' ಎಂಬ ಮಹೋನ್ನತ ಪ್ರಶಸ್ತಿ ಗೆದ್ದಿದ್ದಾರೆ.
ಲಿಟಲ್ ರಾಕ್ ಇಂಡಿಯನ್ ಸ್ಕೂಲ್ ನ ಪ್ರಾಂಶುಪಾಲ ಮ್ಯಾಥ್ಯೂ.ಸಿ ಈ ಕುರಿತು ಮಾಹಿತಿ ನೀಡಿದರು. ಈ ಸ್ಪರ್ಧೆಗೆ ಆನ್ ಲೈನ್ ನಲ್ಲಿ ಸುಮಾರು ಮೂರೂ ಲಕ್ಷ ಸ್ಪರ್ಧಿಗಳ ಪೈಕಿ 100 ಸ್ಪರ್ಧಾಳುಗಳು ಆಯ್ಕೆಯಾಗಿದ್ದರು.

ಈ 100 ಸ್ಪರ್ಧಿಗಳ ಪೈಕಿ ಜೀವಿ ಮತ್ತು ಚೈತನ್ಯ 'ಸ್ಮಾರ್ಟ್ ಫೋನ್ ಏಡೆಡ್ ಇಮೇಜಿಂಗ್ ಸಿಸ್ಟಮ್' ಎಂಬ ತಮ್ಮ ಪ್ರಾಜೆಕ್ಟ್ ನ್ನು ಪುಣೆಯಲ್ಲಿ ಮಂಡಿಸಿದ್ದರು. ಈ ಪೈಕಿ 20 ಸ್ಪರ್ಧಿಗಳಿಗೆ 'ಗ್ರ್ಯಾಂಡ್ ಅವಾರ್ಡ್' ದೊರೆತಿದೆ. ಅವರಲ್ಲಿ ಜೀವಿ ಮತ್ತು ಚೈತನ್ಯ ಆಯ್ಕೆಗೊಂಡಿದ್ದಾರೆ ಎಂದು ತಿಳಿಸಿದರು.
ಈ ಪ್ರಶಸ್ತಿ ವಿಜೇತರ ತಂಡ ಭಾರತವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಹಂತದಲ್ಲಿ ಸ್ಪರ್ಧಿಸಲು ತಯಾರಾಗಿದೆ. ಇದಲ್ಲದೆ ಜೀವಿ ಅವರು 2015 ರಲ್ಲಿ ಗ್ರಾಮೀಣ ಐಟಿ ರಾಷ್ಟ್ರೀಯ ರಸಪ್ರಶ್ನೆ ಪ್ರಶಸ್ತಿಯನ್ನು ಕೂಡಾ ಗೆದ್ದಿದ್ದರು.
ಇನ್ನೊಂದು ಸಂತಸದ ವಿಷಯವೆಂದರೆ ಜೀವಿ ಮತ್ತು ಚೈತನ್ಯ ಅವರು ಲಾಸ್ ಏಂಜಲೀಸ್, ಕ್ಯಾಲಿಫೋರ್ನಿಯಾದಲ್ಲಿ 2017 ಮೇನಲ್ಲಿ ನಡೆಯಲಿರುವ ಇಂಟೆಲ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಮೇಳಕ್ಕೆ ಅರ್ಹರಾಗಿದ್ದಾರೆ. ಇವರಿಬ್ಬರು ಮುಂದಿನ ಸ್ಪರ್ಧೆಗಳಲ್ಲಿ ಜಯ ಶಾಲಿಯಾಗಿ ಬರಲಿ ಎಂದು ಶುಭ ಹಾರೈಸೋಣ
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications