ಉಡುಪಿಯ ಶ್ರೀಕೃಷ್ಣ ಮಠದದಲ್ಲಿ ಮಡೆಸ್ನಾನದ ಬದಲಿಗೆ ಎಡೆಸ್ನಾನ
ಮಡೆಸ್ನಾಕ್ಕೆ ಸುಪ್ರೀಕೋರ್ಟ್ ನಿಷೇಧ ಹೇರಿರುವ ಹಿನ್ನಲೆಯಲ್ಲಿ ಸೋಮವಾರ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಭಕ್ತರು ಮಡೆಸ್ನಾನ ಬದಲಿಗೆ ಎಡೆಸ್ನಾನ ಮಾಡಿ ಹರಕೆ ತೀರಿಸದರು.
ಉಡುಪಿ, ಡಿಸೆಂಬರ್. 06 : ಶ್ರೀಕೃಷ್ಣ ಮಠದ ಸುಬ್ರಹ್ಮಣ್ಯ ಗುಡಿ ಎದುರು ಷಷ್ಟಿ ಅಂಗವಾಗಿ ಮಡೆಸ್ನಾನದ ಬದಲು ಮೊದಲ ಬಾರಿಗೆ ಎಡೆಸ್ನಾನ ಸೋಮವಾರ ನಡೆಯಿತು.
ಈಗಾಗಲೇ ಸುಪ್ರೀಂಕೋರ್ಟ್ ಮಡೆಸ್ನಾನ ಮಾಡಬಾರದೆಂದು ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಕೃಷ್ಣ ಮಠದಲ್ಲಿ ಮೊದಲ ಬಾರಿಗೆ ಭಕ್ತರು ಎಡೆಸ್ನಾನ ಮಾಡಿ ಹರಕೆ ತೀರಿಸಿದರು.
ಇಲ್ಲಿಯವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ನಡೆಯುತ್ತಿದ್ದ ಮಡೆಸ್ನಾನಕ್ಕೆ ಸಂಬಂಧಿಸಿ ನ್ಯಾಯಾಲಯದ ತೀರ್ಪಿನ ಹಿನ್ನಲೆಯಲ್ಲಿ ಪರ್ಯಾಯ ಪೇಜಾವರ ಶ್ರೀ ಮಡೆಸ್ನಾನದ ಬದಲು ಎಡೆಸ್ನಾನದ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ 500 ವರ್ಷಗಳ ಹಿಂದಿನ ಸಂಪ್ರದಾಯವನ್ನು ಮುರಿದಿದ್ದಾರೆ.

ಮಡೆಸ್ನಾನದ ಬಗ್ಗೆ ಧಾರ್ಮಿಕ ಕ್ಷೇತ್ರಗಳಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿರುವಾಗಲೇ ಪೇಜಾವರ ಶ್ರೀಗಳು ತಮ್ಮದೇ ಆಡಳಿತಕ್ಕೆ ಒಳಪಟ್ಟ ಮುಚ್ಲಕೋಡು ಸುಬ್ರಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನವನ್ನು ನಡೆಸಿ ಹೊಸ ಇತಿಹಾಸವನ್ನು ಬರೆದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ಪರ್ಯಾಯದ ಅವಧಿಯಲ್ಲಿ ಮಡೆಸ್ನಾನವನ್ನು ನಿಲ್ಲಿಸಿ ಎಡೆಸ್ನಾನವನ್ನು ಆರಂಭಿಸುವುದಾಗಿ ಶ್ರೀಗಳು ಹೇಳಿದ್ದರು. ಅಂತೆಯೇ ಶ್ರೀಗಳು ಹೇಳಿದಂತೆ ನಡೆದುಕೊಂಡು ಎಡೆಸ್ನಾನವನ್ನು ಆರಂಭಿಸಿದ್ದಾರೆ.

ಬಹಳಷ್ಟು ವರ್ಷಗಳಿಂದ ತೀವ್ರ ವಿವಾದ ಸೃಷ್ಟಿಸಿದ್ದ ಮಡೆಸ್ನಾನ ಪರಿಕಲ್ಪನೆಗೆ ಪೇಜಾವರ ಶ್ರೀಗಳು ಇತಿಶ್ರೀ ಹಾಡಿದ್ದಾರೆ.
ಸುಬ್ರಹ್ಮಣ್ಯ ಗುಡಿ ಎದುರು ದೇವರಿಗೆ ಬಾಳೆ ಎಲೆಯಲ್ಲಿ ವಿಶೇಷ ಪ್ರಸಾದವಿಟ್ಟು ಗುಡಿ ಸುತ್ತ 35 ಬಾಳೆ ಎಲೆಯಲ್ಲಿ ಪಲ್ಯ, ಪಾಯಸ, ಮೈಸೂರು ಪಾಕ್, ಅನ್ನ ಬಡಿಸಿ ವಾದ್ಯ ಘೋಷದ ನಡುವೆ ಪರ್ಯಾಯ ಪೇಜಾವರ ಶ್ರೀಪಾದರ ಉಪಸ್ಥಿತಿಯಲ್ಲಿ ಪೂಜೆ ನಡೆದು ಪ್ರತಿ ಬಾಳೆಗೆ ಪೂಜಾ ಪ್ರಸಾದವಾಗಿ ಸಿಂಗಾರ ಹೂ ಹಾಕಲಾಯಿತು.
ನಂತರ ಉರುಳು ಸೇವೆ ಬಳಿಕ ದೇವರ ಪ್ರಸಾದವನ್ನು ಗೋವುಗಳಿಗೆ ನೀಡಲಾಯಿತು. ಎಂಜಲು ಎಲೆಗಿಂತ ದೇವರ ಪ್ರಸಾದ ಹೆಚ್ಚು ಪವಿತ್ರ. ಕೃಷ್ಣ ಮಠದಲ್ಲಿ ಎಡೆಸ್ನಾನ ಆರಂಭವಾದ ಕಾರಣ ಹರಕೆ ತೀರಿಸುವವವರ ಸಂಖ್ಯೆಯೂ ಕಡಿಮೆಯಾಗಿದೆ.
ಬೆರಳೆಣಿಕೆಯಷ್ಟು ಮಂದಿ ದೇವರ ಪ್ರಸಾದದ ಮೇಲೆ ಹೊರಳಾಡಿ ಹರಕೆ ತೀರಿಸಿದರು. ಏನೇ ಇರಲಿ ಇಲ್ಲಿಯವರೆಗೆ ಮಾಡಿದ ಮಡೆಸ್ನಾನಕ್ಕೆ ಪೂರ್ಣ ವಿರಾಮ ಇಟ್ಟ ಹಾಗೆ ಆಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications