ಕರ್ನಾಟಕ ಚುನಾವಣೆ; ಬಿಜೆಪಿ ಪರ ಮಹಾರಾಷ್ಟ್ರ ಸಿಎಂ ಪ್ರಚಾರ
ಉಡುಪಿ, ಮೇ 07; ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ 10ರ ಬುಧವಾರ ನಡೆಯಲಿದೆ. ಬಹಿರಂಗ ಪ್ರಚಾರ ಮೇ 8ರ ಸೋಮವಾರ ಸಂಜೆ 6 ಗಂಟೆಗೆ ಅಂತ್ಯಗೊಳ್ಳಲಿದೆ. ಕೊನೆಯ ದಿನವೂ ಕೂಡ ಹಲವು ರಾಷ್ಟ್ರೀಯ ನಾಯಕರಿಂದ ಪ್ರಚಾರ ಮಾಡಿಸಲು ಬಿಜೆಪಿ ಯೋಜನೆ ರೂಪಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಪಕ್ಷದ ನಾಯಕ ಏಕನಾಥ್ ಶಿಂಧೆ ಸೋಮವಾರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.

ಏಕನಾಥ್ ಶಿಂಧೆ ಚುನಾವಣಾ ಪ್ರಚಾರ ಆರಂಭಿಸುವ ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಮಾಡಲಿದ್ದಾರೆ. ಬಳಿಕ ಉಡುಪಿಯ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ.
ರೋಡ್ ಶೋ ಆಯೋಜನೆ; ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿಯ ಅಭ್ಯರ್ಥಿ. ಉಡುಪಿ ಕ್ಷೇತ್ರಕ್ಕೆ ಯಶ್ಪಾಲ್ ಸುವರ್ಣ ಅಭ್ಯರ್ಥಿ. ಏಕನಾಥ್ ಶಿಂಧೆ ಬಹಿರಂಗ ಪ್ರಚಾರದ ಕೊನೆಯ ದಿನ ರಾಜ್ಯದಲ್ಲಿ ಪ್ರಚಾರ ನಡೆಸುವ ಮೂಲಕ ಮತ ಯಾಚನೆ ಮಾಡಲಿದ್ದಾರೆ.
ಮೇ 10ರ ಬುಧವಾರ ರಾಜ್ಯದಲ್ಲಿ ಮತದಾನ ನಡೆಯಲಿದೆ. ಮೇ 8ರ ಸೋಮವಾರ ಸಂಜೆ 6 ಗಂಟೆಗೆ ಅಂದರೆ ಮತದಾನಕ್ಕೆ 48 ಗಂಟೆ ಮೊದಲು ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಆಯಾ ಮತಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರಚಾರಕರು ಆ ಮತಕ್ಷೇತ್ರದಲ್ಲಿ ಇರುವಂತಿಲ್ಲ.
ಈ ಕುರಿತು ಈಗಾಗಲೇ ರಾಜಕೀ ಪಕ್ಷಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಸಂಚಾರಿ ವಿಚಕ್ಷಣಾ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ತಂಡದವರು ಮತ ಕ್ಷೇತ್ರದ ವ್ಯಾಪ್ತಿಯ ಲಾಡ್ಜ್, ವಸತಿಗೃಹ, ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಹಾಗೂ ಮಾಲೀಕರಿಗೆ ತಿಳುವಳಿಕೆ ನೀಡಲು ನಿರ್ದೇಶನಗಳನ್ನು ನೀಡಲಾಗಿದೆ.
ಉಡುಪಿ ಜಿಲ್ಲಾಡಳಿತ ಮೇ 8ರ ಸಂಜೆ 5 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12ರ ವರೆಗೆ ಹಾಗೂ ಮೇ 12ರ ಮಧ್ಯರಾತ್ರಿ 12 ಗಂಟೆಯಿಂದ ಮೇ 13ರ ಮಧ್ಯರಾತ್ರಿ 12ರ ವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿದೆ. ಯಾವುದೇ ವಸತಿಗೃಹಗಳಲ್ಲಿ, ಕಲ್ಯಾಣ ಮಂಟಪಗಳು ಸೇರಿದಂತೆ ಮತ್ತಿತರ ಎಲ್ಲಾ ಸಭಾಂಗಣಗಳಲ್ಲಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಮೇ 10ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲ ಮತದಾರರು ತಪ್ಪದೇ ಮತದಾನ ಮಾಡಬೇಕು. ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕರೆ ನೀಡಿದ್ದಾರೆ.
ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಅನುದಾನಿತ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಖಾಸಗಿ ಸಂಸ್ಥೆಗಳಿಗೆ ತುರ್ತು ಸೇವೆಗಳನ್ನು ಹೊರತುಪಡಿಸಿ ಸರ್ಕಾರವು ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ. ರುತ್ತದೆ. ಅದರಂತೆ ಜಿಲ್ಲೆಯಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ನಿಗಾ ವಹಿಸಲಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications