ಉಡುಪಿಯಲ್ಲಿ ಅಳಿವಿನಂಚಿನಲ್ಲಿರುವ ಮಲಬಾರ್ ಟ್ರೀ ಟೋಡ್ ಕಪ್ಪೆ ಪ್ರಬೇಧ ಪತ್ತೆ
ಉಡುಪಿ, ಜುಲೈ 3: ಅಳಿವಿನಂಚಿನಲ್ಲಿರುವ ಕಪ್ಪೆ ಪ್ರಬೇಧವೊಂದು ಪತ್ತೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಂಡುಬರುವ 'ಮಲಬಾರ್ ಟ್ರೀ ಟೋಡ್' ಕಪ್ಪೆ ಪ್ರಬೇಧವನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಪತ್ತೆಹಚ್ಚಲಾಗಿದೆ.
ಮಲಬಾರ್ ಟ್ರೀ ಟೋಡ್ ಕಪ್ಪೆ ಪ್ರಬೇಧ ಅಳಿವಿನಂಚಿನಲ್ಲಿರುವ ಕಪ್ಪೆಯಾಗಿದೆ. ಇತ್ತೀಚೆಗೆ ಕಾರ್ಕಳ ತಾಲ್ಲೂಕಿನ ಮಾಳ ಗ್ರಾಮದ ಮಣ್ಣ ಪಾಪು ಮನೆ ಪರಿಸರದಲ್ಲಿ ಮೂರು ದಿನಗಳ ಕಾಲ ನಡೆದ 'ದಿ ಫ್ರಾಗ್ ವಾಕ್' ವೇಳೆಯಲ್ಲಿ ಇದು ಪತ್ತೆಯಾಗಿದೆ. ಮಣ್ಣಪಾಪು ಮನೆ ವತಿಯಿಂದ ಈ ಪರಿಸರದ ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಬೆಂಗಳೂರು ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಡಿಸೈನ್ ಆಂಡ್ ಟೆಕ್ನಾಲಜಿಯ ಕಪ್ಪೆ ಸಂಶೋಧಕ ಮತ್ತು ಅಧ್ಯಾಪಕ ಡಾ.ಗುರುರಾಜ ಕೆ.ವಿ. ನೇತೃತ್ವದಲ್ಲಿ ಒಟ್ಟು 8 ಮಂದಿ ಕಪ್ಪೆಗಳ ಅಧ್ಯಯನ ನಡೆಸಿದ್ದರು.
ಈ ವೇಳೆ ಮಲಬಾರ್ ಟ್ರೀ ಟೋಡ್ ಸಹಿತ ಒಟ್ಟು 14 ಪ್ರಭೇದಗಳ ಕಪ್ಪೆಗಳು ಪತ್ತೆಯಾಗಿದ್ದವು. ಈ ಮೂಲಕ ಈ ಪ್ರದೇಶವು ಕಪ್ಪೆಗಳಿಗೆ ಸೂಕ್ತವಾದ ಆವಾಸ ಸ್ಥಾನ ಎಂಬುದಾಗಿ ಕಂಡುಕೊಳ್ಳಲಾಗಿದೆ.

ಮಲಬಾರ್ ಟ್ರೀ ಟೋಡ್ ಕಪ್ಪೆ ಪ್ರಬೇಧವು ಗೋವಾ, ಕೇರಳ, ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟಗಳ ಎರಡು ಮೂರು ಕಡೆಗಳಲ್ಲಿ ಮಾತ್ರ ಕಂಡು ಬಂದಿತ್ತು. ಅಲ್ಲಿಯವರೆಗೆ ಕರ್ನಾಟಕದ ಯಾವ ಭಾಗದಲ್ಲೂ ಈ ಕಪ್ಪೆ ಕಂಡುಬಂದಿರುವ ಬಗ್ಗೆ ವರದಿಯಾಗಿರಲಿಲ್ಲ. ಮರದಲ್ಲಿ ವಾಸ ಮಾಡುವ ಅತ್ಯಂತ ವಿಶಿಷ್ಟ ಜೀವನ ಶೈಲಿ ಇರುವ ಈ ಕಪ್ಪೆ ಪ್ರಭೇದದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಾಗಿದೆ.
ಮಲಬಾರ್ ಟ್ರೀ ಟೋಡ್ ಪ್ರಭೇದದ ಗಂಡು ಕಪ್ಪೆಗಳು ಹೆಣ್ಣು ಕಪ್ಪೆಯನ್ನು ಆಕರ್ಷಿಸಿ ಕೂಡುವುದಕ್ಕಾಗಿ ಒಟ್ಟಿಗೆ ಸೇರಿ ಕೂಗುತ್ತವೆ. ಇದನ್ನು ಕೋರಸ್ ಕಾಲ್ (ಸಮೂಹ ಕೂಗು) ಎಂದು ಕರೆಯಲಾಗುತ್ತದೆ. ಒಂದು ಗಂಡು ಕಪ್ಪೆ ಕೂಗಲು ಪ್ರಾರಂಭಿಸಿದರೆ ಸುತ್ತಮುತ್ತಲು ಇರುವ ಸುಮಾರು ಐದಾರು ಗಂಡು ಕಪ್ಪೆಗಳು ಕೂಡ ಸಮೂಹವಾಗಿ ಕೂಗಲು ಪ್ರಾರಂಭಿಸುತ್ತವೆ. ಇದರಲ್ಲಿ ಗಟ್ಟಿಯಾಗಿ ಕೂಗುವ ಮತ್ತು ಬಲಿಷ್ಠವಾಗಿರುವ ಕಪ್ಪೆಯೊಂದಿಗೆ ಹೆಣ್ಣು ಕಪ್ಪೆ ಕೂಡಿಕೊಳ್ಳುತ್ತದೆ. ನಂತರ ಹೆಣ್ಣು ಕಪ್ಪೆ ಮರದಿಂದ ಕೆಳಗೆ ಇಳಿದು ನೀರಿನಲ್ಲಿ ಮೊಟ್ಟೆ ಇಡುತ್ತದೆ.
ಕೆಲವು ಬಾರಿ ಮರದ ಪೊಟರೆಯೊಳಗೆ ನಿಂತ ನೀರಲ್ಲೂ ಈ ಕಪ್ಪೆ ಮೊಟ್ಟೆ ಇಡುತ್ತದೆ. ಈ ಕಪ್ಪೆ ಮಳೆಗಾಲದ ಆರಂಭದಲ್ಲೇ ಕೂಡಿಕೊಂಡು ಮೊಟ್ಟೆಗಳನ್ನು ಇಡುತ್ತದೆ. ಮಳೆಗಾಲದ ಮೂರು ವಾರಗಳ ಬಳಿಕ, ಅಂದರೆ ಜೂನ್ ಅಂತ್ಯದಲ್ಲಿ ಈ ಕಪ್ಪೆ ಕಾಣಲು ಸಿಗುವುದಿಲ್ಲ. ಮೊಟ್ಟೆ ಇಟ್ಟ ಬಳಿಕ ನಾಪತ್ತೆಯಾಗುವ ಈ ಕಪ್ಪೆ, ಆನಂತರ ಯಾರ ಕಣ್ಣಿಗೂ ಈವರೆಗೆ ಕಾಣಿಸಿಲ್ಲ. ಮೊಟ್ಟೆ ಇಟ್ಟ ಬಳಿಕ ಈ ಕಪ್ಪೆ ಮತ್ತೆ ವಾಪಸು ಮರದ ಮೇಲೆ ಹೋಗುತ್ತದೆಯೇ ಅಥವಾ ಬೇರೆ ಎಲ್ಲಿಯಾದರೂ ಬಚ್ಚಿಟ್ಟುಕೊಳ್ಳು ತ್ತದೆಯೇ ಎಂಬುದು ಈವರೆಗೆ ತಿಳಿದುಬಂದಿಲ್ಲ. ಈ ನಿಗೂಢತೆ ಬಗ್ಗೆ ಈಗ ಅಧ್ಯಯನ ನಡೆಯುತ್ತಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications