ಅಚ್ಚರಿ: ಉಡುಪಿಯ ವ್ಯಕ್ತಿಯೊಬ್ಬರ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ
ಉಡುಪಿ, ಜೂನ್ 14: ಉಡುಪಿಯ ವ್ಯಕ್ತಿಯೊಬ್ಬರ ಮೈಯಲ್ಲಿ ಲೋಹದ ವಸ್ತುಗಳು ಅಯಸ್ಕಾಂತದಂತೆ ಅಂಟಿಕೊಳ್ಳುತ್ತವೆ. ಈ ವಿಷಯ ಭಾನುವಾರದಿಂದ ಆ ವ್ಯಕ್ತಿಗೆ ಗೊತ್ತಾಗಿದ್ದು, ಅಚ್ಚರಿಯ ಜೊತೆಗೆ ಅವರ ಆತಂಕಕ್ಕೂ ಕಾರಣವಾಗಿದೆ.
ಉಡುಪಿಯ ಪಿಪಿಸಿ ಕಾಲೇಜು ಸಮೀಪ ಮನೆ ಮಾಡಿಕೊಂಡಿರುವ ರಾಮದಾಸ್ ಶೇಟ್ ಮೂಲತಃ ಚಿನ್ನದ ಕೆಲಸ ಮಾಡುವವರು. ನಿನ್ನೆ ಯಾವುದೋ ವಾಟ್ಸಾಪ್ ವಿಡಿಯೋ ಒಂದನ್ನು ನೋಡಿದ ಅವರು, ಸ್ವತಃ ತಾವೂ ಕೂಡ ಅದರಂತೆ ಪ್ರಯತ್ನಿಸಿದ್ದಾರೆ. ಅಂದರೆ ವ್ಯಕ್ತಿಯೊಬ್ಬರ ದೇಹದಲ್ಲಿ ಲೋಹದ ವಸ್ತುಗಳು ಅಯಸ್ಕಾಂತದಂತೆ ಸೆಳೆಯುವ ಶಕ್ತಿ ಇರುವ ವಿಡಿಯೋ ಅದಾಗಿತ್ತು.
ಆ ವಿಡಿಯೋ ನೋಡಿ ಅಚ್ಚರಿಗೊಂಡ ರಾಮದಾಸ್ ಶೇಟ್ ಕೂಡ ಪ್ರಯತ್ನಿಸಿದ್ದಾರೆ. ಅವರ ಮೈಯಲ್ಲೂ ಲೋಹಗಳು ಅಂಟಿಕೊಳ್ಳುವುದು ಕಂಡುಬಂದಿದೆ. ಇದರಿಂದ ಮನೆಯವರು ಅಚ್ಚರಿಗೆ ಒಳಗಾಗಿದ್ದಾರೆ. ಸ್ಪೂನ್, ನಾಣ್ಯ ಮತ್ತಿತರ ವಸ್ತುಗಳನ್ನು ಮೈಮೇಲೆ ಅಂಟಿಸಿ ಪ್ರಯತ್ನಪಟ್ಟಿದ್ದಾರೆ. ಅದು ಅವರ ಕೈಯಲ್ಲಿ ಆಂಟಿ ಕೊಳ್ಳುವುದರ ಜೊತೆಗೆ ಕೈಯನ್ನು ಅಲ್ಲಾಡಿಸಿದರೂ ಕೂಡ ಅದು ಕೆಳಗೆ ಬೀಳುತ್ತಿರಲಿಲ್ಲ.

ಇದರಿಂದ ಇನ್ನಷ್ಟು ಅಚ್ಚರಿಗೊಂಡ ರಾಮದಾಸ್ ಶೇಟ್ ಆತಂಕಕ್ಕೂ ಒಳಗಾಗಿದ್ದಾರೆ. ನನಗೆ ಮಕ್ಕಳಿದ್ದಾರೆ. ಈ ರೀತಿ ನನ್ನ ದೇಹದಲ್ಲಿರುವ ಆಯಸ್ಕಾಂತೀಯ ಶಕ್ತಿಯ ಬಗ್ಗೆ ನನಗೆ ಹಿಂದೆ ಗೊತ್ತಿರಲಿಲ್ಲ, ಈಗ ಆತಂಕ ಆಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದವರೇ ಹೇಳಬೇಕಿದೆ ಎಂದು ಹೇಳಿದ್ದಾರೆ. ಸದ್ಯ ಈ ವಿಸ್ಮಯ ನೋಡಲು ಅವರ ಮನೆಗೆ ಜನರು ಎಡತಾಕುತ್ತಿದ್ದಾರೆ.
ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟನೆ
ರಾಮದಾಸ್ ಶೇಟ್ ಎಂಬ ವ್ಯಕ್ತಿಯ ದೇಹದಲ್ಲಿ ಕಂಡುಬಂದ ಅಯಸ್ಕಾಂತೀಯ ಲಕ್ಷಣ ಕಂಡುಬಂದ ಹಿನ್ನೆಲೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟನೆ ನೀಡಿದ್ದು, "ರಾಮದಾಸ್ ಎಂಬವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರ ದೇಹದಲ್ಲಿ ಅಯಸ್ಕಾಂತೀಯ ಗುಣ ಕಂಡುಬಂದಿದೆ. ಹಣೆ, ಬೆನ್ನು, ಹೊಟ್ಟೆ, ಭುಜ, ಮೊಣಕೈ ಭಾಗದಲ್ಲಿ ಅಯಸ್ಕಾಂತೀಯ ಲಕ್ಷಣ ಕಂಡುಬಂದಿದೆ.''
"ರಾಮದಾಸ್ ವ್ಯಾಕ್ಸಿನ್ ಪಡೆದುಕೊಂಡ ಮೇಲೆ ಈ ಲಕ್ಷಣ ಕಂಡುಬಂದಿದೆ ಎಂದು ಹೇಳುತ್ತಿದ್ದಾರೆ. ಆದರೆ ವ್ಯಾಕ್ಸಿನ್ನಿಂದ ದೇಹದಲ್ಲಿ ಈ ಲಕ್ಷಣ ಬಂದಿರಲು ಸಾಧ್ಯವಿಲ್ಲ. ಅವರಿಗೆ ಬಿಪಿ ಹಾಗೂ ಶುಗರ್ ಇದೆ. ಆದರೆ, ಅಯಸ್ಕಾಂತೀಯ ಲಕ್ಷಣ ಹೇಗೆ ಬಂತು ಅನ್ನುವುದನ್ನು ತಿಳಿದುಕೊಳ್ಳಲು ಹೆಚ್ಚಿನ ಪರೀಕ್ಷೆಗೆ ಒಳಪಡಿಸಬೇಕಿದೆ,'' ಎಂದು ಜಿಲ್ಲಾಧಿಕಾರಿ ತಿಳಿಸಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications