ಉಡುಪಿ ಜಿಲ್ಲಾಪಂಚಾಯತ್ ಅಧ್ಯಕ್ಷನ ಕಾರಿಗೆ ಸಿಕ್ಕು ವೃದ್ಧ ಬಲಿ
ಉಡುಪಿ, ಆಗಸ್ಟ್ 23: ಜಿಲ್ಲಾ ಪಂಚಾಯತ್ ಅಧ್ಯಕ್ಷರೊಬ್ಬರ ಕಾರಿಗೆ ಸಿಕ್ಕು ವೃದ್ಧರೊಬ್ಬರು ಬಲಿಯಾದ ಘಟನೆ ಇಂದು (ಆಗಸ್ಟ್ 23) ಉಡುಪಿಯ ಕಾಪು ಪಟ್ಟಣದಲ್ಲಿ ನಡೆದಿದೆ.
ಚಂದು ಮೇಸ್ತ್ರಿ(70) ಎಂಬುವವರೇ ಮೃತ ದುರ್ದೈವಿ. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರು ತಮ್ಮ ಇನ್ನೊವಾ ಕಾರಿನಲ್ಲಿ ಶಾಲೆಯೊಂದರ ಉದ್ಘಾಟನಾ ಸಮಾರಂಭಕ್ಕಾಗಿ ತೆರಳುತ್ತಿದ್ದ ಸಮಯದಲ್ಲಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ದಿನಕರ ಅವರು ಚಂದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಅಷ್ಟರಲ್ಲಾಗಲೇ ಅವರು ಅಸುನೀಗಿದ್ದರು.

ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications