Summer Death: ಉಡುಪಿಯಲ್ಲಿ ಬಿರು ಬಿಸಿಲಿಗೆ ಕುಸಿದು ಬಿದ್ದು ಯುವಕ ಸಾವು
ಉಡುಪಿ, ಮೇ 01: ಉಡುಪಿ ಜಿಲ್ಲೆಯಲ್ಲಿ ಬಿಲಿಸಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿರು ಬಿಸಿಲಿಗೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬದಿಯಪ್ಪ ( 37) ಬಿಸಿಲಿನ ತಾಪಕ್ಕೆ ಬಲಿಯಾದ ಯುವಕ.
ವಾತಾವರಣದಲ್ಲಿ ಉಂಟಾಗಿರುವ ತಾಪಮಾನದ ಏರಿಕೆಯಿಂದ ಬಿಸಿಲು ಸಹಿಸಲಾರದೇ ಬದಿಯಪ್ಪ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಕುಸಿದು ಬಿದ್ದಿದ್ದಾರೆ. ಈ ರೀತಿ ಬಿದ್ದಿರುವ ವ್ಯಕ್ತಿಯನ್ನು ಕಂಡ ಸ್ಥಳೀಯರೊಬ್ಬರು ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಿತ್ಯಾನಂದ ಒಳಕಾಡು ಅವರು ಸ್ಥಳಕ್ಕೆ ದೌಡಾಯಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಕೂಡಲೇ ಬದಿಯಪ್ಪನನ್ನು ಆಸ್ಪತ್ರೆರೆ ಕರೆದೊಯ್ಯಲಾಯಿತು. ಆದರೆ ಬಿಸಿಲಿನ ತೀವ್ರತೆಯಿಂದ ಕುಸಿದಿದ್ದ ಬದಿಯಪ್ಪ ಆಸ್ಪತ್ರೆಗೆ ದಾಖಲಿಸುವ ಮೊದಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತಿಯಾದ ಬಿಸಿಲಿಗೆ ವೃದ್ಧೆ ಬಲಿ
ಅತಿಯಾದ ಬಿಸಿಲಿಗೆ ವೃದ್ಧೆ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹಣಮಂತಿ (60) ಮೃತ ಕಾರ್ಮಿಕ ವೃದ್ಧೆ. ಹಣಮಂತಿ ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಏಪ್ರಿಲ್ 29 ಸೋಮವಾರವೂ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬಿಸಿಲಿನಲ್ಲೇ ಕೆಲಸ ಮಾಡುತ್ತಿದ್ದರು. ಈ ವೇಳೆ ಅಧಿಕ ಬಿಸಿಲಿನಿಂದಾಗಿ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications