ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಂದಾಪುರದಲ್ಲಿ ಮೀನು ಹಿಡಿಯಲು ಹೋಗಿ ನಾಪತ್ತೆಯಾದ ವ್ಯಕ್ತಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್ 2: ಮೀನು ಹಿಡಿಯಲೆಂದು ಹೋದ ಕಾರ್ಮಿಕನೊಬ್ಬ ಹೊಳೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಡೇವಿಡ್ ಕರ್ವಾಲೋ (43) ಕುಂದಾಪುರ ಸಮೀಪದ ಕನ್ನಡಕುದ್ರು - ಗುಜ್ಜಾಡಿ ಮಧ್ಯದ ಸೌಪರ್ಣಿಕಾ ನದಿಯಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾದವರು.

 ಮಲ್ಪೆ ಮೀನುಗಾರರ ಮೇಲೆ ಮಹಾರಾಷ್ಟ್ರದ ಮೀನುಗಾರರಿಂದ ಹಲ್ಲೆ ಮಲ್ಪೆ ಮೀನುಗಾರರ ಮೇಲೆ ಮಹಾರಾಷ್ಟ್ರದ ಮೀನುಗಾರರಿಂದ ಹಲ್ಲೆ

ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದವರಾದ ಡೇವಿಡ್ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಬಿಡುವಿನ ವೇಳೆಯಲ್ಲಿ ಮೀನು ಹಿಡಿಯಲು ಹೋಗುತ್ತಿದ್ದರು. ಎಂದಿನಂತೆ ಮೀನು ಹಿಡಿಯಲು ಸೌಪರ್ಣಿಕಾ ನದಿಗೆ ತೆರಳಿದ್ದರು. ಬೆಳಿಗ್ಗೆ ಸುಮಾರು 9 ಗಂಟೆಗೆ ಹೋದವರು ನಾಪತ್ತೆಯಾಗಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದಾದ ಶಂಕೆ ವ್ಯಕ್ತವಾಗಿದೆ.

Man Went For Fishing Missing In Kundapur

ಅನುಮಾನಗೊಂಡ ಮನೆಯವರು ಹುಡುಕಿದರೂ ಪ್ರಯೋಜನವಾಗಲಿಲ್ಲ. ಬಳಿಕ ಗಂಗೊಳ್ಳಿ ಪೊಲೀಸರಿಗೆ ದೂರು ನೀಡಿದ್ದು, ಈಗ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹೊಳೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A laborer went for fishing missing in kundapur. David Carvalo (43) is a missing person. He went missing when he was fishing in Souparnika river,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X