ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ನಿಧನ

ಉಡುಪಿ, ಜನವರಿ 5: ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಅವರು ಹೃದಯಾಘಾತದಿಂದ ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.

Recommended Video

      ಮಂಗಳೂರು: ಅಮಾಯಕರಿಗೆ ದೇಶದ್ರೋಹ ಪಟ್ಟ ಕಟ್ಟಲು ಮುಂದಾಗ್ತಿದ್ಯಾ SDPI..? | Oneinda Kannada

      ಶಿರಿಯಾರದ ಕಾಜ್ರಲ್ಲಿ ಸಮೀಪ ಕಲ್ಬೆಟ್ಟು ಎನ್ನುವಲ್ಲಿ ಮಂಗಳವಾರ ಬೆಳಗಿನ ಜಾವ ಘಟನೆ ನಡೆದಿದೆ. ಸಾಧು ಕೊಠಾರಿ ಅವರು ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

      ಮಂಗಳವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ 'ಮಹಾಕಲಿ ಮಗದೇಂದ್ರ' ಪ್ರಸಂಗದಲ್ಲಿ ಮಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ ಹೃದಯಾಘಾತವಾಯಿತು. ಕುಣಿಯುತ್ತಿದ್ದ ವೇಳೆ ರಂಗದಲ್ಲೇ ಹೃದಯ ನೋವಿನಿಂದ ತೀವ್ರ ಅಸ್ವಸ್ಥಗೊಂಡರು.

      Udupi: Mandarthi Melas Chief Yakshagana Artist Sadhu Kothari Dies Of Heart Attack On Stage

      ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ತಕ್ಷಣ ಕೊಠಾರಿಯವರ ವೇಷ ಕಳಚಿ, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆಸ್ಪತ್ರೆ ತಲುಪುವಾಗಲೇ ಸಾಧು ಕೊಠಾರಿ ಮೃತಪಟ್ಟಿದ್ದಾರೆ.

      Udupi: Mandarthi Melas Chief Yakshagana Artist Sadhu Kothari Dies Of Heart Attack On Stage

      ಪ್ರಸ್ತುತ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿ, ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+