Udupi: ತನ್ನದೇ ಬಸ್ ಕೆಳಗೆ ಸಿಲುಕಿ ದಯಾನಂದ ಶೆಟ್ಟಿ ಸಾವು
ಉಡುಪಿ, ಮಾರ್ಚ್ 14: ತನ್ನದೇ ಮಾಲೀಕತ್ವದ ಬಸ್ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ಬಸ್ ಅನ್ನು ಮಣಿಪಾಲದ 80 ಬಡಗಬೆಟ್ಟುವಿನ ಗ್ಯಾರೇಜ್ ವೊಂದರಲ್ಲಿ ರಿಪೇರಿಗೆ ನೀಡಿದ್ದರು.

ಬಸ್ ರಿಪೇರಿಗೆ ನೀಡಿ ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ನಿನ್ನೆ ( ಮಾರ್ಚ್ 13 ) ಬುಧವಾರ ಬಸ್ ನೋಡಲೆಂದು ಗ್ಯಾರೇಜ್ಗೆ ತೆರಳಿದ್ದರು. ಈ ವೇಳೆ ಚಾಲಕ ಬಸ್ ಅನ್ನು ಏಕಾಏಕಿ ಚಲಾಯಿಸಿದ್ದರಿಂದ ಬಸ್ ಎದುರು ನಿಂತಿದ್ದ ದಯಾನಂದ ಶೆಟ್ಟಿ ಬಸ್ ಚಕ್ರದಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ. ಹಾಗೂ ಗ್ಯಾರೇಜ್ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದಾ ಬಸ್ ಮುಂದಕ್ಕೆ ಚಲಿಸಿದೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಘಟನಾ ಸ್ಥಳದಲ್ಲಿ ಏನಾಗಿದೆ ಎನ್ನುವ ನಿಖರತೆ ತನಿಖೆ ಬಳಿಕ ತಿಳಿದು ಬರಬೇಕಿದೆ.
ಈ ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದವರು ಕೂಡಲೇ ಬಸ್ ಚಕ್ರದ ಕೆಳಗೆ ಸಿಲುಕಿದ್ದ, ದಯಾನಂದ ಶೆಟ್ಟಿ ಅವರನ್ನು ಹೊರ ತೆಗೆದಿದ್ದಾರೆ. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಯಾನಂದ ಅವರನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರಾದೃಷ್ಟವಶಾತ್ ದಯಾನಂದ ಶೆಟ್ಟಿ ಚಿಕಿತ್ಸೆಗೆ ಫಲಿಸದೇ ಮಣಿಪಾಲ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications