ಕಸಾಯಿಖಾನೆಗೆ 15 ಕೋಟಿ ರೂ.ನೀಡಿದ ಖಾದರ್: ಸ್ಪಷ್ಟನೆ ಕೇಳಿದ ಕಾರ್ಕಳ ಶಾಸಕ ಸುನಿಲ್ ಕುಮಾರ್
ಉಡುಪಿ, ಅಕ್ಟೋಬರ್. 08: ಮಂಗಳೂರಿನ ಸ್ಮಾರ್ಟ್ ಸಿಟಿಯ ಅನುದಾನ ಅಭಿವೃದ್ಧಿಗೆ ಬಳಸಬೇಕಾಗಿತ್ತು. ಆದರೆ ಕಸಾಯಿಖಾನೆ ನಿರ್ಮಾಣಕ್ಕೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ. ಈ ಬಗ್ಗೆ ಸಚಿವ ಯು.ಟಿ ಖಾದರ್ ಸ್ಪಷ್ಟನೆ ಕೊಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕಾರ್ಕಳದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುನೀಲ್ ಕುಮಾರ್, 15 ಕೋಟಿ ರೂಪಾಯಿ ಹಣವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡುವುದಿಲ್ಲ. ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ. ಇದರ ವಿರುದ್ಧ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ.
ಖಾದರ್ ತಮ್ಮ ನಿಲುವನ್ನು ಸ್ಪಷ್ಟ ಮಾಡಬೇಕು. ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು. ಖಾದರ್ ಮತ್ತು ಅವರ ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸುತ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ. ಆದರೆ ಖಾದರ್ ಕಸಾಯಿಖಾನೆ ಬಗ್ಗೆ ಜಾಸ್ತಿ ಆಸಕ್ತಿ ಹೊಂದಿದ್ದಾರೆ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ಖಾದರ್ ಗೆ ಆಸಕ್ತಿಯಿಲ್ಲ. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ಅಕ್ರಮ ಕಸಾಯಿಖಾನೆ ಮುಚ್ಚಲು ಸರ್ಕಾರಕ್ಕೆ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಶಾಸಕರು ಕಿಡಿಕಾರಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications