ನಿಪಾಹ್ ವೈರಸ್ ಪತ್ತೆ ಹಚ್ಚಿದ್ದು ಉಡುಪಿಯ ಮಣಿಪಾಲದ ವೈದ್ಯರು
ಉಡುಪಿ, ಮೇ 23: ಕೇರಳದಲ್ಲಿ ಹತ್ತು ಮಂದಿಯನ್ನು ಬಲಿ ಪಡೆದಿರುವ ಮಾರಕ ನಿಪಾಹ್ ವೈರಸ್ ಅನ್ನು ಅತ್ಯಂತ ಕ್ಷಿಪ್ರವಾಗಿ ಪತ್ತೆ ಹಚ್ಚಿದ್ದು, ಉಡುಪಿಯ ಮಣಿಪಾಲದ ವೈದ್ಯರು. ಅಪರೂಪದ ಈ ಕಾಯಿಲೆ ಬಗ್ಗೆ ಮಾಹಿತಿ ಬಂದ ಕೇವಲ ಹತ್ತೇ ತಾಸಿನಲ್ಲಿ ಮಣಿಪಾಲದ ವೈದ್ಯರ ತಂಡ ಈ ಕಾಯಿಲೆಯನ್ನು ಗುರುತಿಸುವಲ್ಲಿ ಯಶ ಕಂಡಿದೆ.
ಹೀಗಾಗಿ ನಿಪಾಹ್ ವೈರಸ್ ಕರ್ನಾಟಕ ಕರಾವಳಿಗೂ ಹಬ್ಬುವುದನ್ನು ತಡೆಯಲು ಸಾಧ್ಯವಾಗಿದೆ. ಮಣಿಪಾಲ್ ಸೆಂಟರ್ ಫಾರ್ ವೈರಸ್ ರೀಸರ್ಚ್ ನ ಡಾ.ಅರುಣ್ ಕುಮಾರ್ ಈ ಕಾಯಿಲೆ ಚಿಕಿತ್ಸೆಯ ನೇತೃತ್ವ ವಹಿಸಿದ್ದಾರೆ. ಗಮನಾರ್ಹ ಸಂಗತಿ ಅಂದ್ರೆ ನಿಪಾಹ್ ದಂತಹ ವೈರಸ್ ರೋಗಗಳನ್ನು ಪತ್ತೆ ಹಚ್ಚಲು ಬೇಕಾದ ಪ್ರಯೋಗಾಲಯ ಮಣಿಪಾಲದ ಕೆಎಂಸಿ ಬಿಟ್ಟರೆ , ಪುಣೆಯಲ್ಲಿ ಮಾತ್ರ ಇದೆ.
ಮಾರಣಾಂತಿಕ ನಿಪಾಹ್ ವೈರಸ್ ಹೇಗೆ ಹರಡುತ್ತೆ ? ಮುನ್ನೆಚ್ಚರಿಕೆ ಏನು?
ಹೀಗಾಗಿ ಮಣಿಪಾಲಕ್ಕೆ ಬಂದ ಸ್ಯಾಂಪಲ್ ನ್ನು ಅತ್ಯಂತ ಕ್ಷಿಪ್ರವಾಗಿ ಪತ್ತೆ ಹಚ್ಚಲು ಸಾಧ್ಯವಾಯಿತು. ಮೇ .18 ರಂದು ಮೊದಲ ಬಾರಿಗೆ ಮಣಿಪಾಲದ ವೈದ್ಯರ ತಂಡ ಈ ಕಾಯಿಲೆಯನ್ನು ಪತ್ತೆ ಹಚ್ಚಿತ್ತು.
ಸಾಯುವ ಮುನ್ನ ನರ್ಸ್ ಲಿನಿ ಹೇಳಿದ ಮಾತುಗಳೇನು!?
ಇದೀಗ ನಿಪಾ ಮಂಗಳೂರಿನ ಇಬ್ಬರಿಗೂ ತಗುಲಿರುವ ಶಂಕೆ ಇದ್ದು, ಈ ಇಬ್ಬರ ಗಂಟಲು ದ್ರವ ಮಾದರಿಯನ್ನು ಹೆಚ್ಚಿನ ತಪಾಸಣೆಗಾಗಿ ಮಣಿಪಾಲದ ಕೆಎಂಸಿಗೆ ಕಳಿಸಿ ಕೊಡಲಾಗಿದೆ. ಮಣಿಪಾಲದಲ್ಲಿ ಸುಸಜ್ಜಿತ ಲ್ಯಾಬ್ ಇರುವ ಕಾರಣದಿಂದ ಕೇರಳ ಗಡಿಯಲ್ಲಿರುವ ಕರಾವಳಿ ಕರ್ನಾಟಕದ ಜನ ಹೆಚ್ಚು ಆತಂಕ ಪಡುವ ಅಗತ್ಯ ಇಲ್ಲ.