ಗಿನ್ನಿಸ್ ದಾಖಲೆ ಪುಟಕ್ಕೆ ಮಣಿಪಾಲ ವಿವಿ ಕಸ್ತೂರ್ಬಾ ಆಸ್ಪತ್ರೆ
ಮಣಿಪಾಲ ವಿವಿಯ ಕಸ್ತೂರ್ಬಾ ಆಸ್ಪತ್ರೆಯು ಜಾಗತಿಕ ಕೈ ತೊಳೆಯುವ ದಿನದ ಅಂಗವಾಗಿ ಆರೋಗ್ಯ ಜನಜಾಗೃತಿಗೆ ಕಳೆದ ಅ. 15ರಂದು ಮಣಿಪಾಲದಲ್ಲಿ ನಡೆಸಿದ್ದ 'ಕೈಗಳ ನೈಮ್ಯಲ್ಯ ರಿಲೇಯಲ್ಲಿ 3422 ಮಂದಿ ಕೈ ತೊಳೆಯುವ ಮೂಲಕ ಗಿನ್ನಿಸ್ ದಾಖಲೆ ಮಾಡಿದೆ.
ಉಡುಪಿ, ಜನವರಿ. 14 : ಮಣಿಪಾಲ ವಿಶ್ವವಿದ್ಯಾಲಯದ ಕಸ್ತೂರ್ಬಾ ಆಸ್ಪತ್ರೆ ಗಿನ್ನಿಸ್ ದಾಖಲೆ ಮಾಡಿದೆ. ಕಳೆದ ವರ್ಷ ಅಕ್ಟೋಬರ್ 15ರಂದು ನಡೆದ ಕೈಗಳ ನೈರ್ಮಲ್ಯ ರಿಲೇಯಲ್ಲಿ ಈ ದಾಖಲೆ ಮಾಡಿದೆ.
ಸ್ವಚ್ಛತೆಯ ಕೊರತೆಯಿಂದಾಗಿ ಉಂಟಾಗುವ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಅನೇಕ ರೋಗಗಳಿಂದ ಪಾರಾಗಲು ಕಳೆದ ವರ್ಷದ ಅ.15ರಂದು ನಡೆದ ಕೈಗಳ ನೈರ್ಮಲ್ಯ ರಿಲೇಗಾಗಿ ಮಣಿಪಾಲ ವಿಶ್ವವಿದ್ಯಾಲಯದ ಕಸ್ತೂರ್ಬಾ ಆಸ್ಪತ್ರೆಯ ಹೆಸರು ಗಿನ್ನಿಸ್ ದಾಖಲೆ ಪುಸ್ತಕದಲ್ಲಿ ಸೇರ್ಪಡೆಗೊಂಡಿದೆ.
ಜಾಗತಿಕ ಕೈತೊಳೆಯುವ ದಿನದ ಅಂಗವಾಗಿ ಏರ್ಪಡಿಸಲಾದ ಈ ರಿಲೇಯಲ್ಲಿ ಕೆಎಂಸಿಯ 3,500 ಮಂದಿ ಪಾಲ್ಗೊಂಡಿದ್ದರು. ಈ ಸಂಬಂಧ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಕಳೆದ ವಾರ 3422 ಪ್ರಮಾಣಪತ್ರಗಳನ್ನು ಪಡೆಯಲಾಗಿತ್ತು.
ಈ ಗಿನ್ನಿಸ್ ವಿಶ್ವ ದಾಖಲೆ ಪ್ರಮಾಣ ಪತ್ರವನ್ನು ಜನವರಿ 13ರಂದು ಅಧಿಕೃತವಾಗಿ ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್.ಬಲ್ಲಾಳ್ ಅವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹಾಗೂ ಮುಖ್ಯ ನಿರ್ವಹಣಾಧಿಕಾರಿ ಡಾ. (ಕರ್ನಲ್) ಎಂ.ದಯಾನಂದ್ ಅವರಿಗೆ ಹಸ್ತಾಂತರಿಸಿದರು.

ಕಳೆದ ವರ್ಷ ನಡೆದ ಕೆಎಂಸಿಯ ವಿಶ್ವ ದಾಖಲೆಯ ಅಭಿಯಾನ ಬೆಳಗ್ಗೆ 7ಗಂಟೆಗೆ ಪ್ರಾರಂಭಗೊಂಡು ಸರಿ ಸುಮಾರು ಅದೇ ದಿನ ಮಧ್ಯರಾತ್ರಿಯ ವೇಳೆಗೆ ಕೊನೆಗೊಂಡಿತ್ತು.
ಹೆಚ್ಚು ಕಡಿಮೆ 5000 ಮಂದಿ ಬೋಧಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲು ಹೆಸರು ನೊಂದಾಯಿಸಿದ್ದರು. ಕೊನೆಗೆ ಇದಕ್ಕೆ ಮಂಗಳ ಹಾಡಿದಾಗ 3422 ಮಂದಿ ಕೈಗಳನ್ನು ತೊಳೆಯುವ ಕೆಲಸವನ್ನು ಮುಗಿಸಿದ್ದರು. ಅಲ್ಲದೇ ದಾಖಲೆಗಾಗಿ ಗಿನ್ನಿಸ್ ಸಂಸ್ಥೆ ಇದೇ ಸಂಖ್ಯೆಯನ್ನು ಅನುಮೋದಿಸಿತ್ತು.
ಈ ಬಗ್ಗೆ ಮಾಹಿತಿ ನೀಡಿದ ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಕೈಗಳ ನೈರ್ಮಲ್ಯದ ಕಾಳಜಿ ವಹಿಸುವ ಸಂದೇಶ ಸಾರಲು ಮತ್ತು ಆಸ್ಪತ್ರೆ ಸೋಂಕುಗಳನ್ನು ತಡೆಗಟ್ಟುವುದಕ್ಕೆ ವೈದ್ಯರು ಹಾಗೂ ಇತರ ಆರೋಗ್ಯ ಆರೈಕೆ ವೃತ್ತಿಪರರು ನಿಯಮಿತವಾಗಿ ಕೈಗಳನ್ನು ತೊಳೆಯುವ ಅಭ್ಯಾಸವನ್ನು ಪ್ರೋತ್ಸಾಹಿಸಲು ಜಾಗತಿಕ ಕೈತೊಳೆಯುವ ದಿನದಂದು ಒಂದು ಸಾಮಾಜಿಕ ಉಪಕ್ರಮವಾಗಿ ಈ ಅಭಿಯಾನವನ್ನು ಮಾಡಿದ್ದೆವು.
ಆದರೆ, ಇದೀಗ ವಿಶ್ವ ದಾಖಲೆ ಗರಿ ಸಿಕ್ಕಿದ್ದು ನಿಜಕ್ಕೂ ಸಂತಸ ಹಾಗೂ ಹೆಮ್ಮೆಯ ವಿಷಯ. ಎಲ್ಲರೂ ತಮ್ಮ ಆರೋಗ್ಯದ ಕಡೆಗೆ ಕಾಳಜಿ ವಹಿಸಿ ಸ್ವಚ್ಛತೆಯನ್ನು ಕಾಪಾಡಿಕೊಂಡರೆ ಉತ್ತಮ.
ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಆರೋಗ್ಯವನ್ನು ವೃದ್ದಿಸಬೇಕಾದರೆ ನಾವು ಕೈಗಳ ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
-
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications