ರಸ್ತೆ ದುರಸ್ಥಿಗಾಗಿ ರಸ್ತೆ ಹೊಂಡದಲ್ಲಿ ಈಜಿ ಪ್ರತಿಭಟನೆ
ಉಡುಪಿ, ಆ.08 : ರಸ್ತೆಯ ಹೊಂಡದಲ್ಲಿ ನಿಂತಿರುವ ನೀರಿನಲ್ಲಿ ಈಜಾಡಿ ರಸ್ತೆ ದುರಸ್ಥಿತಿಗಾಗಿ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಮಣಿಪಾಲದಲ್ಲಿ ರಸ್ತೆಯನ್ನು ತಕ್ಷಣ ಸರಿಪಡಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಪ್ರತಿಭಟನೆ ನಡೆದಿರುವುದು ಮಣಿಪಾಲದ ಟೈಗರ್ ಸರ್ಕಲ್ ನಲ್ಲಿರುವ ಬಸ್ ನಿಲ್ದಾಣದ ಬಳಿ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಜನರು ಸಂಚಾರ ನಡೆಸುತ್ತಾರೆ. ಆದರೆ, ಜಿಲ್ಲಾಡಳಿತ, ನಗರಸಭೆ ಅಥವಾ ಯಾವುದೇ ಜನ ಪ್ರತಿನಿಧಿಗಳಿಗೂ ಇಲ್ಲಿನ ರಸ್ತೆಗಳ ಸ್ಥಿತಿ ಕಾಣುವುದಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ಯಾರೂ ಇತ್ತ ಗಮನ ಹರಿಸಲಿಲ್ಲ. ಆದ್ದರಿಂದ, ಇಂದು ರಸ್ತೆಯ ಹೊಂಡದ ನೀರಿನಲ್ಲಿ ಈಜುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ರಸ್ತೆಯಲ್ಲಿ ಈಜಿ ಪ್ರತಿಣಭಟನೆ ನಡೆಸಿದವರು ನಿತ್ಯಾನಂದ ಒಳಕಾಡು. ನಿತ್ಯಾನಂದ ಅವರ ಪ್ರತಿಭಟನೆಗೆ ಹಲವು ಜನರು ಬೆಂಬಲ ನೀಡಿದರು ಮತ್ತು ರಸ್ತೆ ದುರಸ್ಥಿ ಮಾಡುವಂತೆ ಒತ್ತಾಯಿಸಿದರು.

ರಸ್ತೆಗಾಗಿ ವಿನೂತನ ಪ್ರತಿಭಟನೆ
ಈ ವ್ಯಕ್ತಿ ಆಕಸ್ಮಿಕವಾಗಿ ರಸ್ತೆಯ ಹೊಂಡಕ್ಕೆ ಬಿದಿಲ್ಲ. ಇದು ಈಜುಕೊಳವೂ ಅಲ್ಲ. ರಸ್ತೆ ದುರಸ್ಥಿ ಮಾಡಿ ಎಂದು ಒತ್ತಾಯಿಸಲು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ರೀತಿ ಇದು.

ಈ ಪ್ರತಿಭಟನೆ ನಡೆದಿದ್ದು ಮಣಿಪಾಲ್ ನಲ್ಲಿ
ಈ ಪ್ರತಿಭಟನೆ ನಡೆದಿರುವುದು ಮಣಿಪಾಲದಲ್ಲಿರುವ ಟೈಗರ್ ಸರ್ಕಲ್ ಬಸ್ ನಿಲ್ದಾಣದ ಬಳಿ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಜನರು ಸಂಚಾರ ನಡೆಸುತ್ತಾರೆ. ಆದರೆ, ರಸ್ತೆ ಮಾತ್ರ ಸಂಪೂರ್ಣವಾಗಿ ಹದಗೆಟ್ಟಿದೆ.

ಪ್ರತಿಭಟನೆ ನಡೆಸಿದ್ದು ನಿತ್ಯಾನಂದ ಒಳಕಾಡು
ಈ ರೀತಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡಿದ್ದು ನಿತ್ಯಾನಂದ ಒಳಕಾಡು. ಹಲವು ಸಾರ್ವಜನಿಕರು ಈ ಪ್ರತಿಭಟನೆಗೆ ಸಹಕಾರ ನೀಡಿದರು ಮತ್ತು ರಸ್ತೆ ದುರಸ್ತಿಗೆ ಆಗ್ರಹಿಸಿದರು.

ಇದು ವಿಶಿಷ್ಟ ಪ್ರತಿಭಟನೆ
ಈ ರಸ್ತೆಯನ್ನು ದುರಸ್ಥಿ ಆಡಲು ಆಗ್ರಹಿಸಿ ಹಿಂದೆಯೂ ಪ್ರತಿಭಟನೆ ನಡೆಸಲಾಗಿತ್ತು. ಆದರೆ, ದುರಸ್ಥಿ ಮಾಡದ ಕಾರಣ ಈ ರೀತಿ ವಿನೂತನವಾಗಿ ಪ್ರತಿಭಟಿಸಿ ಗಮನ ಸೆಳೆಯಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications